Friday, September 20, 2024

ಪ್ರಾಯೋಗಿಕ ಆವೃತ್ತಿ

ವಿವಾದಿತ ಹೇಳಿಕೆ ನೀಡಿದ ನಟಿ ರಚಿತಾ ರಾಮ್ : ಮದ್ದೂರಿನಲ್ಲಿ ದಾಖಲಾಯ್ತು ಕೇಸ್

ಕನ್ನಡ ಚಿತ್ರರಂಗದ ಬಹು ಬೇಡಿಕೆಯ ನಟಿ ರಚಿತಾ ರಾಮ್ ಸುಖಾಸುಮ್ಮನೆ ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಅವರು ನೀಡಿದ್ದ ಹೇಳಿಕೆಯ ವಿರುದ್ಧ ಮದ್ದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

nudikarnataka.com
ಶಿವಲಿಂಗಯ್ಯ ಅವರು ನೀಡಿದ ದೂರಿಗೆ ಮದ್ದೂರು ಪೊಲೀಸರು ಸ್ವೀಕೃತಿ ನೀಡಿರುವುದು

ರಚಿತಾ ರಾಮ್ ಇತ್ತೀಚೆಗೆ ನಡೆದ ‘ಕ್ರಾಂತಿ’ ಚಿತ್ರದ ಬೃಹತ್ ಕಾರ್ಯಕ್ರಮದಲ್ಲಿ ಈ ಬಾರಿ ಜ.26ರ ಗಣರಾಜ್ಯೋತ್ಸವವನ್ನು ಮರೆತು ಕ್ರಾಂತಿ ಸಿನಿಮಾವನ್ನು ನೋಡಿ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಯೇ  ಅವರಿಗೆ ಉರುಳಾಗಿದೆ, ಇತಂಹ ಹೇಳಿಕೆ ನೀಡುವ ಮೂಲಕ ಗಣರಾಜ್ಯೋತ್ಸವ ಮಹತ್ವವನ್ನು ಕುಗ್ಗಿಸುವ ಕೆಲಸ ಮಾಡಿ, ಅವಮಾನಿಸಿದ್ದಾರೆ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಶಿವಲಿಂಗಯ್ಯ ದೂರು ದಾಖಲಿಸಿದ್ದು, ರಚಿತಾ ರಾಮ್ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!