ಸುಮಾರು ಅರ್ಧ ಕೆ.ಜಿ. ತೂಕದ ಚಿನ್ನಾಭರಣಗಳನ್ನು ಕಳ್ಳರು ಮನೆಯ ಬೀಗ ಹೊಡೆದು ಕಳವು ಮಾಡಿರುವ ಘಟನೆ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಸೋಮವಾರ ಸಂಜೆ ನಡೆದಿದೆ.
ಸೋಮನಹಳ್ಳಿಯ ಗ್ರಾಮದ ಲೋಲಾಕ್ಷಿ ಎಂಬುವರ ಮನೆಯಲ್ಲಿ ಕಳ್ಳತನವಾಗಿದ್ದು, ಲೋಲಾಕ್ಷಿ ಅವರು ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಮದ್ದೂರು ಪಟ್ಟಣಕ್ಕೆ ತೆರಳಿದ್ದ ಸಮಯದಲ್ಲಿ ಮನೆಯ ಬೀಗ ಹೊಡೆದು ಬೀರುವಿನಲ್ಲಿದ್ದ ಅರ್ಧ ಕೆಜಿ 1/2 ಕೆಜಿ ಚಿನ್ನ ಹಾಗೂ ಒಂದು ಕೆಜಿ ಬೆಳ್ಳಿ ಆಭರಣಗಳನ್ನು (ಅಂದಾಜು 40 ಲಕ್ಷ ರೂ. ಬೆಲೆಬಾಳುವ ) ಕದ್ದು ಪರಾರಿಯಾಗಿದ್ದಾರೆ. ಬೆಂಗಳೂರು – ಮೈಸೂರು ಹೆದ್ದಾರಿ ಸಮೀಪವಿರುವ ಮನೆಯಲ್ಲಿ ಕಳ್ಳತನ ನಡೆದಿರುವುದು ಗ್ರಾಮಸ್ಥರಿಗೆ ಆತಂಕ ತಂದಿದೆ. ಲೋಲಾಕ್ಷಿ ಅವರು ಒಬ್ಬರೇ ವಾಸವಿದ್ದರು ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಬೆರಳಚ್ಚು ತಂಡ ಹಾಗೂ ಶ್ವಾನದಳ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದು, ಮದ್ದೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.