Thursday, September 19, 2024

ಪ್ರಾಯೋಗಿಕ ಆವೃತ್ತಿ

ಮನೆಯ ಬೀಗ ಹೊಡೆದು ಅರ್ಧ ಕೆ.ಜಿ. ಚಿನ್ನಾಭರಣ ಕಳವು

ಸುಮಾರು ಅರ್ಧ ಕೆ.ಜಿ. ತೂಕದ ಚಿನ್ನಾಭರಣಗಳನ್ನು ಕಳ್ಳರು ಮನೆಯ ಬೀಗ ಹೊಡೆದು ಕಳವು ಮಾಡಿರುವ ಘಟನೆ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಸೋಮವಾರ ಸಂಜೆ ನಡೆದಿದೆ.

ಸೋಮನಹಳ್ಳಿಯ ಗ್ರಾಮದ ಲೋಲಾಕ್ಷಿ ಎಂಬುವರ ಮನೆಯಲ್ಲಿ ಕಳ್ಳತನವಾಗಿದ್ದು, ಲೋಲಾಕ್ಷಿ ಅವರು ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಮದ್ದೂರು ಪಟ್ಟಣಕ್ಕೆ ತೆರಳಿದ್ದ ಸಮಯದಲ್ಲಿ ಮನೆಯ ಬೀಗ ಹೊಡೆದು ಬೀರುವಿನಲ್ಲಿದ್ದ ಅರ್ಧ ಕೆಜಿ 1/2 ಕೆಜಿ ಚಿನ್ನ ಹಾಗೂ ಒಂದು ಕೆಜಿ ಬೆಳ್ಳಿ ಆಭರಣಗಳನ್ನು (ಅಂದಾಜು 40 ಲಕ್ಷ ರೂ. ಬೆಲೆಬಾಳುವ ) ಕದ್ದು ಪರಾರಿಯಾಗಿದ್ದಾರೆ. ಬೆಂಗಳೂರು – ಮೈಸೂರು ಹೆದ್ದಾರಿ ಸಮೀಪವಿರುವ ಮನೆಯಲ್ಲಿ ಕಳ್ಳತನ ನಡೆದಿರುವುದು ಗ್ರಾಮಸ್ಥರಿಗೆ ಆತಂಕ ತಂದಿದೆ. ಲೋಲಾಕ್ಷಿ ಅವರು ಒಬ್ಬರೇ ವಾಸವಿದ್ದರು ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಬೆರಳಚ್ಚು ತಂಡ ಹಾಗೂ ಶ್ವಾನದಳ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದು, ಮದ್ದೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!