Thursday, September 19, 2024

ಪ್ರಾಯೋಗಿಕ ಆವೃತ್ತಿ

ಹಾಡುಹಗಲೆ ಕುಡುಗೋಲಿನಿಂದ ಕೊಚ್ಚಿ ಕೊಲೆಗೆ ಯತ್ನ

ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಹಳೇ ದ್ವೇಷಕ್ಕಾಗಿ ಮದ್ದೂರು ತಾಲೂಕು ಕಛೇರಿ ಆವರಣದಲ್ಲೆ ಹಾಡು ಹಗಲೇ ವ್ಯಕ್ತಿಯೊಬ್ಬನನ್ನು ಹತ್ಯೆಗೆಯಲು ವಿಫಲ ಯತ್ನ ನಡೆದಿರುವ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.

ಮದ್ದೂರು ತಾಲೂಕಿನ ಮರಳಿಗೆ ಗ್ರಾಮದ ಚನ್ನರಾಜು ಅಲಿಯಾಸ್ ಚಾಟಿ ಎಂಬಾತನನ್ನು ಅದೇ ಗ್ರಾಮದ ನಂದನ್ ಕುಮಾರ್ ಎಂಬ ವ್ಯಕ್ತಿ ಕೂಡುಗೋಲಿನಿಂದ ಕೊಚ್ಚಿ ಮಾರಣಾಂತಿಕವಾಗಿ ಹಲ್ಲೆಗೊಳಿಸಿದ್ದಾನೆ.

ತೀವ್ರವಾಗಿ ಗಾಯಗೊಂಡಿರುವ ಚನ್ನರಾಜುನನ್ನು ಮದ್ದೂರು ತಾಲೂಕು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಮಿಮ್ಸ್ ಗೆ ಕಳುಹಿಸಲಾಗಿದೆ. ಹಲ್ಲೆ ನಡೆಸಿದ ನಂದನ್ ಕುಮಾರ್ ನನ್ನು ಸಾರ್ವಜನಿಕರೇ ಹಿಡಿದು ಥಳಿಸಿದ್ದಾರೆ. ಮದ್ದೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ನಂದನ್ ಕುಮಾರ್ ಗೆ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಮದ್ದೂರು ಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಕೊಂಡಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!