ಕೆಲ ಕಾಂಗ್ರೆಸ್ ನಾಯಕರ ಮಾತಿನಿಂದ ತಟಸ್ಥರಾಗಿರುವ ಕಾಂಗ್ರೆಸ್ ಕಾರ್ಯಕರ್ತರೆಲ್ಲ ಒಂದುಗೂಡಿ ಕಾಂಗ್ರೆಸ್ ಅಧಿಕಾರಕ್ಕೆ ತರಬೇಕಿದೆ ಎಂದು ಕಾಂಗ್ರೆಸ್ ಮುಖಂಡ ಡಾ.ಮೂರ್ತಿ ಮನವಿ ಮಾಡಿದರು.
ಮಳವಳ್ಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ನಡೆದ ‘ಪ್ರಜಾಧ್ವನಿ’ ಸಮಾವೇಶದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೆಲವರು ಮುಖಂಡರಿಂದ ನೋವಾಗಿ ಸಾಕಷ್ಟು ಕಾಂಗ್ರೆಸ್ ಕಾರ್ಯಕರ್ತರು ತಟಸ್ಥರಾಗಿದ್ದಾರೆ.ತಾಲ್ಲೂಕಿನಲ್ಲಿ ಕಾಂಗ್ರೆಸ್ ಪಕ್ಷ ಬಲಿಷ್ಠವಾಗಿದ್ದು,ಕಾಂಗ್ರೆಸ್ ಅಧಿಕಾರಕ್ಕೆ ತರಲು ಎಲ್ಲಾ ನೋವನ್ನು ಮರೆತು ಮುಂದೆ ಬರಬೇಕು ಎಂದು ಮನವಿ ಮಾಡಿದರು.
ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಪುಟ್ಟರಾಮು, ಜಿ.ಪಂ. ಮಾಜಿ ಸದಸ್ಯ ಮಹದೇವಸ್ವಾಮಿ, ಚೌಡೇಶ್, ಲಿಂಗಾಪಟ್ಟಣ ಗಂಗಾಧರ್, ಅಣ್ಣೇಗೌಡ. ಜಯಮ್ಮ ಸೇರಿದಂತೆ ಹಲವರಿದ್ದರು.