ರಾಜ್ಯದಲ್ಲಿ ದುರಾಡಳಿತ ನಡೆಸುತ್ತಿರುವ ಭ್ರಷ್ಟ ಬಿ.ಜೆ.ಪಿ. ಸರ್ಕಾರದ ಭ್ರಷ್ಟಾಚಾರದ ವಿರುದ್ಧ ರಾಜ್ಯದಾದ್ಯಂತ ಕಾಂಗ್ರೆಸ್ ಪಕ್ಷವು ‘ಪ್ರಜಾಧ್ವನಿ’ ಯಾತ್ರೆಯನ್ನು ಸಂಘಟಿಸಿದ್ದು, ಜ.27ರಂದು ಪ್ರಜಾಧ್ವನಿಯಾತ್ರೆಯೂ ಮಂಡ್ಯ ನಗರದ ಮಂಡ್ಯ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯಲಿದ್ದು, ಜಿಲ್ಲೆಯಾದ್ಯಂತ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವವಹಿಸಬೇಕೇಂದು ಜಿಲ್ಲಾ ಕಾಂಗ್ರೆಸ್ ಇತರೆ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎಸ್.ಕೃಷ್ಣ ಮನವಿ ಮಾಡಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಕರ್ನಾಟಕದಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕರ್ನಾಟಕ ಕಾಂಗ್ರೆಸ್ ಪಕ್ಷದ ವತಿಯಿಂದ “ಪ್ರಜಾಧ್ವನಿ” ಯಾತ್ರೆಯನ್ನು ಕೈಗೊಂಡಿದ್ದು ಎಲ್ಲಾ ಜಿಲ್ಲೆಗಳಲ್ಲಿಯೂ ಅಪಾರ ಜನ ಬೆಂಬಲಗಳಿಸುತ್ತಿದೆ ಎಂದರು.
ಜ.27ರಂದು ಮಂಡ್ಯ ನಗರದದಲ್ಲಿ ನಡೆಯುವ “ಪ್ರಜಾಧ್ವನಿ” ಸಮಾವೇಶದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಮುಖಂಡರು ಭಾಗವಹಿಸುವರು ಎಂದರು.
ಪ್ರಸ್ತುತ ರಾಜ್ಯ ಆಡಳಿತ ನಡೆಸುತ್ತಿರುವ ಬಿ.ಜೆ.ಪಿ. ಸರ್ಕಾರವನ್ನು ಕಿತ್ತೊಗೆದು ರಾಜ್ಯದ ಪ್ರತಿಯೊಬ್ಬರಿಗೂ ಅನುಕೂಲವಾಗುವಂತಹ ಜನಸ್ನೇಹಿ ಸರ್ಕಾರವನ್ನು ತರಬೇಕಾದ ನಿಟ್ಟಿನಲ್ಲಿ ಹಾಗೂ ಹಿಂದುಳಿದ ವರ್ಗಗಳ ಹಿತಕಾಯುವ ಏಕೈಕ ಪಕ್ಷವಾದ ಕಾಂಗ್ರೇಸ್ ಸರ್ಕಾರ ರಾಜ್ಯದ ಆಡಳಿತದ ಚುಕ್ಕಾಣಿ ಹಿಡಿಯುವಂತೆ ಮಾಡಲು ಈ ಸಮಾವೇಶಕ್ಕೆ ಹೆಚ್ಚಿನ ಸಾರ್ವಜನಿಕರು ಆಗಮಿಸುವಂತೆ ಅವರು ಮನವಿ ಮಾಡಿದರು.
ಹಿಂದುಳಿದ ವರ್ಗಗಳ ಎಲ್ಲಾ ಜನರೂ ಈ ಸಮಾವೇಶದಲ್ಲಿ ಭಾಗವಹಿಸಿ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಆಡಳಿತಕ್ಕೆ ತರಲು ಶ್ರಮಿಸಬೇಕು. ಅಲ್ಲದೆ ಜನಪರವಾದ ಯೋಜನೆಗಳನ್ನು ಜಾರಿಗೊಳಿಸಲು ಅವಕಾಶ ನೀಡಬೇಕೆಂದು ಕೋರಿದರು.
ಗೋಷ್ಠಿಯಲ್ಲಿ ಕಾಂಗ್ರೆಸ್ ವಿವಿಧ ಘಟಕಗಳ ಮುಖಂಡರಾದ ವಕೀಲ ಸುಂಡಹಳ್ಳಿ ಮಂಜುನಾಥ್, ಬಿ.ಟಿ.ಗುರುರಾಜ್, ರಮೇಶ್ ಎಂ. ಎ., ಹೆಚ್.ಪಿ.ಸತೀಶ್, ಎಸ್.ವಿ.ಮಂಜುನಾಥ್, ಡಿ.ರಮೇಶ್, ಪುಟ್ಟಸ್ವಾಮಿ, ಬಿ.ಲಿಂಗಯ್ಯ, ರಾಜಣ್ಣ ಉಪಸ್ಥಿತರಿದ್ದರು.