Thursday, September 19, 2024

ಪ್ರಾಯೋಗಿಕ ಆವೃತ್ತಿ

ಚಾಂಮುಂಡೇಶ್ವರಿಯಲ್ಲಿ ಜಿ.ಟಿ.ದೇವೇಗೌಡರಿಗೆ ವಿರೋಧಿ ಅಲೆ : ಹೇಮಂತ್ ಕುಮಾರಗೌಡ

ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡರಿಗೆ ಆಡಳಿತ ವಿರೋಧಿ ಅಲೆ ಇದೆ, ಅಲ್ಲದೆ ಅವರು ಕುಟುಂಬ ರಾಜಕಾರಣದಲ್ಲಿ ತೊಡಗಿರುವುದರಿಂದ ಬಿಜೆಪಿಗೆ ಜನ ಬೆಂಬಲ ವ್ಯಕ್ತವಾಗಿದೆ ಎಂದು ಚಾಂಮುಂಡೇಶ್ವರಿ ಕ್ಷೇತ್ರದ ಬಿಜೆಪಿ ಸಂಭಾವ್ಯ ಅಭ್ಯರ್ಥಿ‌ ಕೆ.ಬೆಟ್ಟಹಳ್ಳಿ ಹೇಮಂತ್ ಕುಮಾರಗೌಡ ಹೇಳಿದರು.

ಪಾಂಡವಪುರ ತಾಲೂಕಿನ ಕೆ.ಬೆಟ್ಟಹಳ್ಳಿ ಗ್ರಾಮದಲ್ಲಿ ಇಂದು ಮಂಚಮ್ಮ, ಮಲ್ಲೇದೇವರು ಹಾಗೂ ಮಾಕಮ್ಮ ದೇವರ ಮೂರ್ತಿ ಪ್ರತಿಷ್ಪಾಪನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿ.ಟಿ.ದೇವೇಗೌಡರಿಗೆ ಯಾವುದೇ ಸಿದ್ಧಾಂತವಿಲ್ಲ, ಜನರ ಜೊತೆಯೂ ಒಡನಾಟವಿಲ್ಲ, ಅವರು ಕುಟುಂಬ ರಾಜಕಾರಣ ಮಾಡುತ್ತಿದ್ದಾರೆ, ಹೆಂಡತಿ, ಮಕ್ಕಳು ಮತ್ತು ಮೊಮ್ಮೊಕ್ಕಳು ಕೂಡ ರಾಜಕೀಯಕ್ಕೆ ಬರುತ್ತಿದ್ದಾರೆ. ಆದರೆ ನನಗೆ ಯಾವುದೇ ಕುಟುಂಬ ರಾಜಕಾರಣ ಇಲ್ಲ. ಆದ್ದರಿಂದ ಬಿಜೆಪಿಯಿಂದ ಸ್ಪರ್ಧಿಸಿದರೆ ನನ್ನ ಗೆಲುವು ನಿಶ್ಚಿತ ಎಂದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!