Friday, September 20, 2024

ಪ್ರಾಯೋಗಿಕ ಆವೃತ್ತಿ

ನಾನು ಬಂದಿರುವುದಕ್ಕೆ ಕೆಲವರಿಗೆ ಭಯ ಹುಟ್ಟಿದೆ : ಆರ್.ಅಶೋಕ್

ನಾನು ಬಂದಿರುವುದಕ್ಕೆ ಕೆಲವರಿಗೆ ಭಯ ಹುಟ್ಟಿದೆ, ಬೇರೆ ಪಕ್ಷದವರು ಎತ್ತಿ ಕಟ್ಟುತ್ತಿದ್ದಾರೆ. ನಮ್ಮ ಪಕ್ಷದವರು ಯಾರು ಈ ರೀತಿ ಮಾಡಲ್ಲ. ನನ್ನ ಮೇಲೆ ಷಡ್ಯಂತ್ರ ರೂಪಿಸುವ ಧೈರ್ಯ ಯಾರಿಗೂ ಇಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಪ್ರತಿಕ್ರಿಯಿಸಿದರು.

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಗೋ ಬ್ಯಾಕ್ ಅಭಿಯಾನಕ್ಕೆ ವಿರೋಧ ಪಕ್ಷಗಳತ್ತ ಕೈ ಬೊಟ್ಟು ಮಾಡಿದರು. ನಾನು ಯಾವ ಹೊಂದಾಣಿಕೆ ರಾಜಕಾರಣ ಮಾಡಲ್ಲ. ಇದು ನಮ್ಮ ಪಕ್ಷದ ಸಂಸ್ಕೃತಿ ಅಲ್ಲ. ಆ ತರ ಯಾವುದು ಸಹ ಇಲ್ಲ ಎಂದರು.

ಉಸ್ತುವಾರಿ ಸಚಿವರಿಗಾಗಿ 2 ಸಾವಿರ ಬೈಕ್ ಮೆರವಣಿಗೆ ಮಾಡಿ ದೇವಸ್ಥಾನಕ್ಕೆ ಕರೆದುಕೊಂಡು ಹೋಗಿದ್ರು,
ಮಂಡ್ಯಕ್ಕೆ ಒಂದು ಶಕ್ತಿ ಬಂದಿದೆ. ಪ್ರಬಲವಾಗಿ ಬಂದಾಗ ಈ ರೀತಿಯಾಗಿ ಅಪಪ್ರಚಾರ ಬರ್ತಿದೆ ಅಷ್ಟೇ.
ನೋಡೋಣಾ ಯಾರು ಮಾಡಿದ್ದಾರೆ ಅಂತಾ. ಕಾಂಗ್ರೆಸ್ ಅಥವಾ ಜೆಡಿಎಸ್ ನವರ ಅಂತ ನೋಡೊಣಾ.
ನಮ್ಮ ಕಾರ್ಯಕರ್ತರನ್ನು ಜೊತೆಯಾಗಿ ಕರೆದೊಯ್ಯುವ ಕೆಲಸ ಮಾಡ್ತೇನೆ. ಬಹಳಷ್ಟು ಬದಲಾವಣೆ ತರ್ತೇನೆ.
ಇದುವರೆಗೂ ಯಾರು ಅಸಮಾಧಾನ ವ್ಯಕ್ತಪಡಿಸಿಲ್ಲ ಎಂದು ಹೇಳಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!