Thursday, September 19, 2024

ಪ್ರಾಯೋಗಿಕ ಆವೃತ್ತಿ

ಕಾಂಗ್ರೆಸ್ ಪಕ್ಷದಿಂದ ಮಾತ್ರ ಅಭಿವೃದ್ಧಿ- ಆರ್ಥಿಕ ಸುಧಾರಣೆ : ಚಲುವರಾಯಸ್ವಾಮಿ

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮಾತ್ರ ಹಿಂದುಳಿದವರ, ದಲಿತರ, ಅಲ್ಪಸಂಖ್ಯಾತರ ಅಭಿವೃದ್ಧಿಯ ಜೊತೆಗೆ ರಾಜ್ಯದ ಅಭಿವೃದ್ಧಿಯಾಗಲಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಎನ್.ಚಲುವರಾಯಸ್ವಾಮಿ ಹೇಳಿದರು.

ಮಂಡ್ಯದಲ್ಲಿ ಶುಕ್ರವಾರ ನಡೆದ ಪ್ರಜಾಧ್ವನಿಯಾತ್ರೆಯಲ್ಲಿ ಸೇರಿದ್ದ ಅಪಾರ ಜನಸ್ತೋಮವನ್ನುದ್ದೇಶಿಸಿ ಮಾತನಾಡಿದ ಅವರು, ಈ ಹಿಂದೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದ ಸಂದರ್ಭದಲ್ಲಿ ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿ, ರಾಜ್ಯದ ಜನರ ಅಭಿವೃದ್ಧಿಗೆ ಕೊಡುಗೆ ನೀಡಿದೆ. ಆದರೆ ಈಗ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಕಮಿಷನ್ ದಂಧೆಯಲ್ಲಿ ನಿರತವಾಗಿದೆ, ಇದರಿಂದ ಅಭಿವೃದ್ಧಿ ಕುಂಠಿತವಾಗಿದೆ ಎಂದರು.

ಜೆಡಿಎಸ್ ನಿಂದ ಅಭಿವೃದ್ಧಿ ಸಾಧ್ಯವಿಲ್ಲ 

ಕಳೆದ ಬಾರಿ ಜಿಲ್ಲೆಯಲ್ಲಿ ಏಳಕ್ಕೆ ಏಳು ಸ್ಥಾನಗಳಲ್ಲಿಯೂ ಜೆಡಿಎಸ್ ಪಕ್ಷವನ್ನು ಗೆಲ್ಲಿಸಿದರೂ ಅವರು ನಿಮಗೆ ಮಾಡಿದ್ದು ಏನು ? ಪಕ್ಕದ ಜಿಲ್ಲೆಗಳಾದ ಹಾಸನ, ಮೈಸೂರು ಹಾಗೂ ತುಮಕೂರುಗಳನ್ನು ನೋಡಿದ್ದೀರಾ ? ಅವು ಎಷ್ಟು ಅಭಿವೃದ್ಧಿಯಾಗಿವೆ ಅಂತ, ಆದರೆ ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್ ನ ಬೆಂಬಲ ಪಡೆದು  ಒಂದು ವರ್ಷ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಮಾಡಿದ್ದೇನು ಎಂದು ಪ್ರಶ್ನಿಸಿದರು.

ಅವರು ಮೈಷುಗರ್ ಕಾರ್ಖಾನೆಯನ್ನು ಖಾಸಗಿಯವರಿಗೆ ನೀಡಲು ನೋಡಿದರು. ಜಿಲ್ಲೆಗೆ ಒಂದೇ ಒಂದು ಆಶ್ರಯ ಮನೆಯನ್ನು ನೀಡಲಿಲ್ಲ, ಹಾಲಿನ ಪ್ರೋತ್ಸಾಹ ಧನ ಕಾಲ ಕಾಲಕ್ಕೆ ಬಿಡುಗಡೆಯಾಗಲಿಲ್ಲ, ವಿದ್ಯಾರ್ಥಿ ವೇತನ ನೀಡಲಿಲ್ಲ, ಇಂತಹವರನ್ನು ಬೆಂಬಲಿಸಿ ಕೆಳದ ಬಾರಿ ತಪ್ಪು ಮಾಡಿದೀರಿ, ಈ ಭಾರಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿ ಕೊಡಿ, ಮಂಡ್ಯವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುತ್ತೇವೆ ಎಂದು ಭರವಸೆ ನೀಡಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!