ಮಂಡ್ಯ ತಾಲ್ಲೂಕಿನ ಆದಿ ಚುಂಚನಗಿರಿ ಶಿಕ್ಷಣ ಟ್ರಸ್ಟ್ ವತಿಯಿಂದ ಕೊಮ್ಮೆರಹಳ್ಳಿ ವಿಶ್ವಮಾನವ ಕ್ಷೇತ್ರದಲ್ಲಿ ರಥಸಪ್ತಮಿ ಪ್ರಯುಕ್ತ 101- ಸೂರ್ಯ ನಮಸ್ಕಾರ ಮಾಡುವ ಯೋಗ ಕಾರ್ಯಕ್ರಮ ನಡೆಯಿತು.
ಟ್ರಸ್ಟಿನ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮನಂದನಾಥ ಸ್ವಾಮೀಜಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಯೋಗಾಸನವು ಮಕ್ಕಳಲ್ಲಿ ಏಕಾಗ್ರತೆ ಮತ್ತು ಸೃಜನಾಶೀಲತೆ ಹೆಚ್ಚಿಸಿ ಸಮಾಜದಲ್ಲಿ ಉತ್ತಮ ಪ್ರಬುದ್ಧತೆಯನ್ನು ಕಂಡುಕೊಳ್ಳಲು ಸಹಕಾರಿಯಾಗುತ್ತದೆ ಎಂದು ಹೇಳಿದರು.
ಅಲ್ಲಿನ ಮುಖ್ಯೋಪಾಧ್ಯಯರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತಿಯಲ್ಲಿದ್ದರು.