Thursday, September 19, 2024

ಪ್ರಾಯೋಗಿಕ ಆವೃತ್ತಿ

ಸುಮಲತಾ ಅಂಬರೀಶ್ ಕಾಂಗ್ರೆಸ್ ಸೇರಿದರೆ ಪಕ್ಷ ಸದೃಢ : ಎಲ್‌.ಡಿ‌.ರವಿ

ಸುಮಲತಾ ಅಂಬರೀಶ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡರೆ ಪಕ್ಷ ಸದೃಢವಾಗುತ್ತದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಎಲ್. ಡಿ.ರವಿ ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಮಂಡ್ಯ ಜಿಲ್ಲೆಯಲ್ಲಿ ಮತ್ತಷ್ಟು ಸದೃಢವಾಗಬೇಕಾದರೆ ಸುಮಲತಾ ಅವರನ್ನು ಪಕ್ಷಕ್ಕೆ ಕರೆತಂದರೆ ಒಳ್ಳೆಯದು. ಅಂಬರೀಶ್ ಅವರು ಇದ್ದಾಗ ಕಾಂಗ್ರೆಸ್ ಪಕ್ಷ ಜಿಲ್ಲೆಯಲ್ಲಿ ಸದೃಢವಾಗಿತ್ತು. ಅಂಬರೀಶ್ ನಿಧನದ ನಂತರ ಆ ಸ್ಥಾನವನ್ನು ಸುಮಲತಾ ಅವರು ತುಂಬಿದ್ದಾರೆ. ಪ್ರಸ್ತುತ ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಗೆ ಉತ್ತಮವಾದ ವಾತಾವರಣವಿದ್ದು, ಇದರ ಜೊತೆಗೆ ಸುಮಲತಾ ಅಂಬರೀಶ್,ಅವರ ಬೆಂಬಲಿಗರು,ಅಂಬರೀಶ್ ಅಭಿಮಾನಿಗಳು ಕಾಂಗ್ರೆಸ್ ಪಕ್ಷ ಸೇರಿದರೆ ಪಕ್ಷ ಮತ್ತಷ್ಟು ಸದೃಢವಾಗುವುದರ ಜೊತೆಗೆ ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಪಡೆಯಬಹುದು ಎಂದರು.

ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ನಡುವೆ ನೇರ ಹಣಾಹಣಿ ಇದೆ. ಈ ಸಂದರ್ಭದಲ್ಲಿ ಮಂಡ್ಯ ಜಿಲ್ಲೆಯ ಎಲ್ಲಾ ಕಾಂಗ್ರೆಸ್ ಮುಖಂಡರು ಕೂಡ ತಮ್ಮಲ್ಲಿರುವ ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಸಂಸದೆ ಸುಮಲತಾ ಅಂಬರೀಶ್‌ರವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರೆ ಮಂಡ್ಯ ಜಿಲ್ಲಾ ಕಾಂಗ್ರೆಸಿಗೆ ಆನೆ ಬಲ ಬಂದಂತಾಗುತ್ತದೆ ಎಂಬುವುದರಲ್ಲಿ ಎರಡು ಮಾತಿಲ್ಲ.ಅಲ್ಲದೆ ಲಕ್ಷಾಂತರ ಅಂಬರೀಶ್ ಅಭಿಮಾನಿಗಳು ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವವನ್ನು ಬೆಳೆಸಿಕೊಳ್ಳಲು ಮತ್ತು ಉಳಿಸಿಕೊಳ್ಳಲು ಭದ್ರ ನೆಲೆ ಹಾಕಿಕೊಟ್ಟಂತಾಗುತ್ತದೆ.

ಆದ ಕಾರಣ ಸುಮಲತಾ ಅಂಬರೀಶ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಂಡು ಮಂಡ್ಯ ಜಿಲ್ಲಾ ಕಾಂಗ್ರೆಸ್ ಪಕ್ಷವು ಮತ್ತಷ್ಟು ಬಲವರ್ಧನೆಗೊಳ್ಳಲಿ ಎಂದು ಎಲ್‌.ಡಿ.ರವಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!