ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ನಾಗಮಂಗಲ ಇವರ ವತಿಯಿಂದ,ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ನಲ್ಲಿ 2022-23ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮೀಕರಣಕ್ಕೆ ತಾಲ್ಲೂಕು ಕನ್ನಡ ಭಾಷಾ ಅಧ್ಯಾಪಕರಿಗೆ ಒಂದು ದಿನದ ಕಾರ್ಯಾಗಾರ ಏರ್ಪಡಿಸಲಾಗಿತ್ತು.
ರಾಜ್ಯ ಸಂಪನ್ಮೂಲ ವ್ಯಕ್ತಿ ತಮ್ಮಣ್ಣ ಗೌಡ ಅವರು ವಿವಿಧ ಹಂತಗಳಲ್ಲಿ ಪ್ರಶ್ನೆ ಪತ್ರಿಕೆ ತಯಾರಿಕೆ ಬಗ್ಗೆ ಶಿಕ್ಷಕರಿಗೆ ಮಾಹಿತಿ ನೀಡುವುದರ ಮೂಲಕ ಪ್ರಶ್ನೆ ಪತ್ರಿಕೆಯ ನೀಲ ನಕಾಶೆ ತಯಾರಿಸುವ ವಿಧಾನವನ್ನು ತಿಳಿಸಿದರು.
ಈ ಸಂದರ್ಭದಲ್ಲಿ ನಾಗೇಂದ್ರ ಮೂರ್ತಿ, ಕನ್ನಡ ಭಾಷಾ ವಿಷಯ ಪರಿವೀಕ್ಷಕರು. ಚಿಕ್ಕ ನಾಯಕ ರಾಜ್ಯ ಸಂಪನ್ಮೂಲ ವ್ಯಕ್ತಿ, ಕೃಷ್ಣಮೂರ್ತಿ, ರಂಗನಾಥ್, ಕೆ.ಎನ್. ರಮೇಶ್, ಕಾಂತರಾಜು, ಜಿ ಅಧ್ಯಕ್ಷರು ಅನುದಾನಿತ ಶಾಲೆಗಳು, ದಿನೇಶ್ ಹೆರಗನಹಳ್ಳಿ, ಹಾಗೂ ಶಿಕ್ಷಕರು ಭಾಗವಹಿಸಿದ್ದರು.