ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನದಾಸ್ ಅವರ ” ನ್ಯಾಯಾಂಗ ಒಳನೊಟ” ಕೃತಿ ಲೋಕಾರ್ಪಣೆ ಕಾರ್ಯಕ್ರಮ ನಾಳೆ (ಫೆ.3) ರಂದು ಶುಕ್ರವಾರ ಸಂಜೆ 4:30ಕ್ಕೆ ಬೆಂಗಳೂರಿನ ಕಬ್ಬನ್ ಪಾರ್ಕ್ ನಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ (ಎನ್. ಜಿ.ಓ ಹಾಲ್ ) ಸಂಭಾಗಣದಲ್ಲಿ ನಡೆಯಲಿದೆ.
ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ವಿ. ಪಾಟೀಲ್ ಅಧ್ಯಕ್ಷತೆ ವಹಿಸುವರು. ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಬಿ. ವೀರಪ್ಪ ‘ನ್ಯಾಯಾಂಗ ಒಳನೋಟ’ ಕೃತಿಯನ್ನು ಲೋಕಾರ್ಪಣೆ ಮಾಡುವರು.
ನಿವೃತ್ತ ನ್ಯಾ. ಹೆಚ್.ಎನ್. ನಾಗಮೋಹನ್ ದಾಸ್ ಉಪಸ್ಥಿತರಿರುವರು. ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷ ಎ.ಪಿ. ರಂಗನಾಥ್ ಅತಿಥಿಯಾಗಿ ಭಾಗವಹಿಸುವರು. ಜನ ಪ್ರಕಾಶನ ರಾಜಶೇಖರಮೂರ್ತಿ ಪ್ರಸ್ತಾವನೆ ನುಡಿ ನುಡಿಯುವರು ಎಂದು ಅಖಿಲ ಭಾರತ ವಕೀಲರ ಒಕ್ಕೂಟದ (AILU) ರಾಜ್ಯಾಧ್ಯಕ್ಷ ಎಸ್.ಶಂಕರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.