ಭಾರತ ರತ್ನ ಬಾಬಾ ಸಾಹೇಬ್ ಡಾ:ಬಿ.ಆರ್. ಅಂಬೇಡ್ಕರ್ ಅವರ ಕನಸಿನ ಭಾರತ ಕಾರ್ಯಕ್ರಮವನ್ನು ಇದೇ ತಿಂಗಳ ಫೆ.5ನೇ ತಾರೀಖಿನಂದು ಭಾನುವಾರ ಬೆಳಗ್ಗೆ 11 ಗಂಟೆಗೆ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಮುಂಭಾಗ ದೇವಲಾಪುರದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ತಮಟೆ ಬಾರಿಸುವ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಸಿದ್ದರಾಜು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ನಾಗಮಂಗಲ ತಾಲೂಕಿನ ಕಾರ್ಯನಿರತರ ಪತ್ರಕರ್ತರ ಸಂಘದ ಕಚೇರಿಯಲ್ಲಿ ಸಿದ್ದರಾಜುರವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ತಮಟೆ ಸ್ಪರ್ಧೆಯಲ್ಲಿ ಭಾಗವಹಿಸಿದವರಿಗೆ ಪ್ರಥಮ ಬಹುಮಾನ 10,000 ದ್ವಿತೀಯ ಬಹುಮಾನ 7000 ತೃತೀಯ ಬಹುಮಾನ 5000 ರೂ ಗಳನ್ನು ನೀಡಲಾಗುತ್ತದೆ ಎಂದರು. ತಮಟೆ ಬಾರಿಸುವ ಕಲೆಗಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರು.
ಈ ಸುದ್ದಿಗೋಷ್ಠಿಯಲ್ಲಿ ಕಾಂತರಾಜು, ಅರಕೆರೆ ನಾಗರಾಜು, ನಲಕುಂದಿ ಅರುಣ್ ಕುಮಾರ್ ಸೇರಿದಂತೆ ಇನ್ನು ಮುಂತಾದವರು ಉಪಸ್ಥಿತರಿದ್ದರು