ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಂಡ್ಯ ತಾಲ್ಲೂಕಿನ ಯತ್ತಗದಹಳ್ಳಿ ಗ್ರಾಮದಿಂದ ಚೀರನಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯ 2 ಕೋಟಿ ರೂ.ವೆಚ್ಚದ ಕಾಮಗಾರಿಗೆ ಶಾಸಕ ರವೀಂದ್ರ ಶ್ರೀಕಂಠಯ್ಯ ಶನಿವಾರ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸರ್ಕಾರ ಅನುದಾನ ನೀಡದ ಕಾರಣ ಮಂಡ್ಯದಿಂದ ಚೀರನಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆ ಬಹಳಷ್ಟು ದಿನಗಳಿಂದ ಹದಗೆಟ್ಟಿತ್ತು.ಈ ಹಿನ್ನಲೆಯಲ್ಲಿ ಸರ್ಕಾರದ ಮೇಲೆ ಒತ್ತಡ ತಂದು 2ಕೋಟಿ ರೂ.ಅನುದಾನದಲ್ಲಿ ಇಂದು ಕಾಮಗಾರಿಗೆ ಚಾಲನೆ ನೀಡಲಾಗಿದೆ.ಇದರಿಂದ ಈ ಭಾಗದ ಜನರ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ ಎಂದರು.
ಗುತ್ತಿಗೆದಾರರಿಗೆ ಉತ್ತಮ ಗುಣಮಟ್ಟದ ಕಾಮಗಾರಿ ಮಾಡುವಂತೆ ತಾಕೀತು ಮಾಡಿದ್ದೇನೆ.ಜನರೂ ಕೂಡ ಕಾಮಗಾರಿ ಉತ್ತಮ ಗುಣಮಟ್ಟದಲ್ಲಿ ನಡೆಯುವ ಬಗ್ಗೆ ನಿಗಾವಹಿಸಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡರಾದ ಬೇಲೂರು ಶಶಿಧರ್,ರಾಕೇಶ್,ಬೋರೇಗೌಡ, ಗ್ರಾ.ಪಂ. ಸದಸ್ಯರಾದ ಮಂಜುಳ,ಮಮತಾ,ಸುವರ್ಣಾವತಿ,ಗ್ರಾ.ಪಂ.ಮಾಜಿ ಅಧ್ಯಕ್ಷ ಅವಿನಾಶ್ ಮತ್ತಿತರರಿದ್ದರು.