Thursday, September 19, 2024

ಪ್ರಾಯೋಗಿಕ ಆವೃತ್ತಿ

ದಂಡಿನ‌ ಮಾರಮ್ಮ ಪರಕ್ಕೆ 25 ಸಾವಿರ ನೀರಿನ ಬಾಟಲ್ ನೀಡಿದ ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್

ಮದ್ದೂರು ತಾಲ್ಲೂಕು ಆತಗೂರು ಹೋಬಳಿಯ ಮಲ್ಲನಕುಪ್ಪೆ ಗ್ರಾಮದಲ್ಲಿ ಶ್ರೀ ದಂಡಿನಮಾರಮ್ಮ ದೇವರ ಪರಕ್ಕೆ ಬರುವ ಭಕ್ತಾದಿಗಳಿಗೆ ಸುಮಾರು 25 ಸಾವಿರಕ್ಕೂ ಹೆಚ್ಚು ಅರ್ಧ ಲೀಟರ್ ನ ಕುಡಿಯುವ ನೀರಿನ ಬಾಟಲ್ ವ್ಯವಸ್ಥೆಯನ್ನು ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್(ರಿ.) ವತಿಯಿಂದ ಮಾಡಲಾಯಿತು ಎಂದು ಭಕ್ತಾದಿ ಸಿದ್ದರಾಜು ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಿದ್ದರಾಜು, ಸಮಾಜ ಸೇವಕ‌ ಕದಲೂರು ಉದಯ್ ಅವರು ತಮ್ಮ ಕೈಲಾದ ಸಹಾಯವನ್ನು ಪ್ರತಿ ಗ್ರಾಮಗಳಿಗೆ ನೀಡುತ್ತಾ ಬಂದಿದ್ದಾರೆ.

ಈ ಬಾರಿ ಸುಮಾರು 25ಸಾವಿರಕ್ಕೂ ಅಧಿಕ ಭಕ್ತಾದಿಗಳು ಮಾರಮ್ಮ ಪರಕ್ಕೆ ಬರುವ ನಿರೀಕ್ಷೆಯಿದ್ದು, ಪ್ರತಿಯೊಬ್ಬರಿಗೂ ನೀರಿನ ವ್ಯವಸ್ಥೆ ಮಾಡಲು ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ ನಿರ್ಧರಿಸಿ 25000 ನೀರಿನ ಬಾಟಲ್ ಅನ್ನು ನೀಡಿದ್ದಾರೆ. ಅವರಿಗೆ ಒಳ್ಳೆಯದಾಗಲಿ ಎಂದು ಶುಭ ಕೋರಿದರು.

ಈ ಸಂದರ್ಭದಲ್ಲಿ ಟ್ರಸ್ಟ್ ನ ಸದಸ್ಯರಾದ ರವಿ ಕೆ.ಎಂ. ರವರು ಭೇಟಿ ನೀಡಿ, ದೇವಿಯ ದರ್ಶನ ಪಡೆದು, ನೀರಿನ ಬಾಟಲ್ ಗಳನ್ನು ಭಕ್ತಾದಿಗಳಿಗೆ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಗುರುಪ್ರಸಾದ್. ಸಿಪಾಯಿ ಶ್ರೀನಿವಾಸ್ ಹಾಗೂ ಗ್ರಾಮಸ್ಥರು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!