Thursday, September 19, 2024

ಪ್ರಾಯೋಗಿಕ ಆವೃತ್ತಿ

ಕೆ.ಆರ್.ಪೇಟೆ ಆರೋಗ್ಯ ಮೇಳಕ್ಕೆ ಡಿಸಿ ಅಶ್ವತಿ ಚಾಲನೆ

ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ ಇಂದು‌ ನಡೆದಬಆರೋಗ್ಯ ಮೇಳಕ್ಕೆ ಜಿಲ್ಲಾಧಿಕಾರಿ ಅಶ್ವತಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು,ಆರೋಗ್ಯ ಇಲಾಖೆಯ ಅಧಿಕಾರಿಗಳು ಸಾರ್ವಜನಿಕರಿಗೆ ಸರ್ಕಾರದಿಂದ ಸಿಗುವ ಆರೋಗ್ಯ ಸೌಲಭ್ಯಗಳ ಬಗ್ಗೆ ಜನರಿಗೆ ಮಾಹಿತಿ ನೀಡಬೇಕು.

ಜನರ ಆರೋಗ್ಯವನ್ನು ಪರೀಕ್ಷೆಗೆ ಒಳಪಡಿಸಿದ ನಂತರ ಪಾಲಿಸಬೇಕಿರುವ ಚಿಕಿತ್ಸಾ ವಿಧಾನಗಳ ಬಗ್ಗೆ ಹಾಗೂ ಆರೋಗ್ಯವನ್ನು ಕಾಪಾಡಿಕೊಳ್ಳಲು ಅನುಸರಿಸಬೇಕಾದ ಕ್ರಮವನ್ನು ಜನರಿಗೆ ತಿಳಿಸಿ ಎಂದರು.

ಆರೋಗ್ಯವನ್ನು ಬಹಳ ಕಾಳಜಿಯಿಂದ ನೋಡಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಬೇಕು.ಮನೆಯ ಎಲ್ಲಾ ಸದಸ್ಯರು ಆರೋಗ್ಯದಿಂದ ಇದ್ದಾಗ ಮಾತ್ರ ಅದೊಂದು ಆರೋಗ್ಯವಂತ ಕುಟುಂಬ ಎನಿಸಿಕೊಳ್ಳಲು ಸಾಧ್ಯವೆಂದರು.

ಜನತೆ ಆರೋಗ್ಯ ಮೇಳದ ಸದುಪಯೋಗವನ್ನು ಪಡೆದುಕೊಂಡು,ವೈದ್ಯರು ನೀಡುವ ಚಿಕಿತ್ಸೆ,ಔಷಧಿ ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಬೇಕೆಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಎಂ. ವಿ.ರೂಪ, ವಿವಿಧ ಇಲಾಖೆಯ ಅಧಿಕಾರಿಗಳು, ಆರೋಗ್ಯ ಇಲಾಖೆಯ ವೈದ್ಯರುಗಳು, ಸಿಬ್ಬಂದಿ ವರ್ಗದವರು ಸೇರಿದಂತೆ ಇತರರು ಉಪ್ಥತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!