ಮಂಡ್ಯ ನಗರದ ಶಂಕರಪುರದ ಆದಿಚುಂಚನಗಿರಿ ಶಾಖಾ ಮಠದ ಶ್ರೀಗಂಗಾಧರೇಶ್ವರ ಸ್ವಾಮಿ ಮತ್ತು ಶ್ರೀ ಪಾರ್ವತಿ ಅಮ್ಮನವರ ದೇವಾಲಯದಲ್ಲಿ ಶನಿವಾರ ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ರುದ್ರಹೋಮ, ಸಹಸ್ರ ನಾಮಾರ್ಚಾನೆ, ಅಭಿಷೇಕ, ಭಜನೆ, ಭಕ್ತಿ ಸಂಗೀತ ಹಾಗೂ ವಿಶೇಷ ಪೂಜೆ ನಡೆಯಿತು.
ಶನಿವಾರ ಬೆಳಗ್ಗೆಯಿಂದಲೇ ಅಪಾರ ಸಂಖ್ಯೆಯಲ್ಲಿ ಭಕ್ತರು ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪುನೀತರಾದರು.
ಈ ವೇಳೆ ಆದಿಚುಂಚನಗಿರಿ ಶಾಖಾ ಮಠದ ಪ್ರಧಾನ ಕಾರ್ಯದರ್ಶಿ ಪುರುಶೋತ್ತಮನಂದನಾಥ ಸ್ವಾಮಿಜೀ ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷವು ಸಹ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜಾ ಕೈಂಕರ್ಯಗಳನ್ನು ಆಯೋಜಿಸಲಾಗಿದೆ. ಇದರ ಮೂಲ ಉದ್ದೇಶ ಈ ನಾಡಿನ ಜನರಿಗೆ ಒಳಿತಾಗಿ ಎಲ್ಲರೂ ಸುಖ, ಶಾಂತಿ, ನೆಮ್ಮದಿಯಿಂದ ಜೀವನ ನಡೆಸುವಂತಾಗಲಿ ಎಂಬುದಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ವೇದ ಬ್ರಹ್ಮ ರಾಘವೇಂದ್ರ, ಪ್ರಧಾನ ಅರ್ಚಕರಾದ ಮಂಜುನಾಥ್, ಪ್ರಭು ಸ್ವಾಮಿ, ಯೋಗ ಶಿಕ್ಷಕ ಮಂಜು ಹಾಜರಿದ್ದರು.