ಪ್ರಜಾವಾರ್ತೆ ದಿನಪತ್ರಿಕೆ 16 ನೇ ವರ್ಷಕ್ಕೆ ಕಾಲಿಟ್ಟಿರುವ ಸಂದರ್ಭದಲ್ಲಿ ಪ್ರಬುದ್ಧ ಪ್ರಜಾ ವಿಶೇಷ ಸಂಚಿಕೆ ಹೊರತಂದಿದ್ದು,27 ರಂದು ಬಿಡುಗಡೆಯಾಗಲಿದೆ ಎಂದು ಪ್ರಜಾವಾರ್ತೆ ಸಂಪಾದಕ ಕೆ.ಎನ್.ನವೀನ್ ಕುಮಾರ್ ತಿಳಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು,ಫೆ.27 ರಂದು ನಗರದ ಕರ್ನಾಟಕ ಸಂಘದ ಆವರಣದಲ್ಲಿ ಬೆಳಿಗ್ಗೆ 10.30 ಕ್ಕೆ ಕಾರ್ಯಕ್ರಮವನ್ನು ಶಾಸಕ ಸಿ.ಎಸ್. ಪುಟ್ಟರಾಜು ಉದ್ಘಾಟನೆ ಮಾಡಲಿದ್ದು, ಕೆಪಿಸಿಸಿ ಉಪಾಧ್ಯಕ್ಷ ಎನ್. ಚಲುವರಾಯಸ್ವಾಮಿ ಉಪಸ್ಥಿತರಿರಲಿದ್ದಾರೆ ಎಂದರು.
ವಿಶೇಷ ಸಂಚಿಕೆಯನ್ನು ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮಹಮದ್ ಜಫ್ರುಲ್ಲಾಖಾನ್ ಬಿಡುಗಡೆ ಮಾಡಲಿದ್ದು,ಶಾಸಕ ಎಂ.ಶ್ರೀನಿವಾಸ್ ಅಧ್ಯಕ್ಷತೆ ವಹಿಸಲಿದ್ದು,ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಪ್ರಧಾನ ಭಾಷಣ ಮಾಡಲಿದ್ದಾರೆ ಎಂದರು.
ಮುಖ್ಯ ಅತಿಥಿಗಳಾಗಿ ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಪಿ.ಉಮೇಶ್, ಪಿ.ಇ.ಟಿ.ಅಧ್ಯಕ್ಷ ವಿಜಯಾನಂದ್,ಕಾಂಗ್ರೆಸ್ ಮುಖಂಡರಾದ ಗಣಿಗ ರವಿಕುಮಾರ್, ಸಿದ್ಧಾರೂಢ ಸತೀಶ್ ಗೌಡ,ಅಮರಾವತಿ ಚಂದ್ರಶೇಖರ್, ಜೆಡಿಸ್ ಮುಖಂಡ ಮುದ್ದನಘಟ್ಟ ಮಹಾಲಿಂಗೇಗೌಡ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ವಿಶೇಷ ಆಹ್ವಾನಿತರಾಗಿ ಎಸ್.ಬಿ.ಎಜುಕೇಷನ್ ಟ್ರಸ್ಟ್ ಕಾರ್ಯದರ್ಶಿ ಮೀರಾ ಶಿವಲಿಂಗಯ್ಯ,ನಗರಸಭೆ ಅಧ್ಯಕ್ಷ ಎಚ್.ಎಸ್.ಮಂಜು,ಪತ್ರಕರ್ತರಾದ ಮತ್ತೀಕೆರೆ ಜಯರಾಮ್,ಕೆ.ಸಿ.ಮಂಜುನಾಥ್, ವಾರ್ತಾ ಇಲಾಖೆ ಸಹಾಯಕ ನಿರ್ದೇಶಕಿ ಎಚ್.ಎಸ್.ನಿರ್ಮಲ ಉದ್ಯಮಿ ಹಾಳೇಗೌಡ ಭಾಗವಹಿಸಲಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಖಜಾಂಚಿ ಆರ್.ಎನ್.ನಂಜುಂಡ ಸ್ವಾಮಿ,ಶಶಿಕುಮಾರ್ ಉಪಸ್ಥಿತರಿದ್ದರು.