Wednesday, October 23, 2024

ಪ್ರಾಯೋಗಿಕ ಆವೃತ್ತಿ

ಕಾಂಗ್ರೆಸ್ ನಾಯಕ ಆರ್​.ಧ್ರುವನಾರಾಯಣ್ ಹೃದಯಾಘಾತದಿಂದ ನಿಧನ

ಕಾಂಗ್ರೆಸ್ ನಾಯಕ, ಮಾಜಿ ಸಂಸದ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್​.ಧ್ರುವನಾರಾಯಣ್(61) ಹೃದಯಾಘಾತಕ್ಕೆ ಒಳಗಾಗಿ ಶನಿವಾರ ಮುಂಜಾನೆ ನಿಧನರಾಗಿದ್ದಾರೆ.

ಆರ್.ಧ್ರುವನಾರಾಯಣ ಅವರಿಗೆ ಶನಿವಾರ (ಮಾ.11) ಬೆಳಗ್ಗೆ 6.30ರ ವೇಳೆಗೆ ಅವರಿಗೆ ಎದೆ ನೋವು ಕಾಣಿಸಿಕೊಂಡಿತು, ತಕ್ಷಣ ಅವರನ್ನು ಮೈಸೂರಿ ಒಂಟಿಕೊಪ್ಪಲಿನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅವರು ಬದುಕುಳಿಯಲಿಲ್ಲ ಎಂದು ಧ್ರುವನಾರಾಯಣಗೆ ಚಿಕಿತ್ಸೆ ನೀಡಿದ ವೈದ್ಯ ಮಂಜುನಾಥ್ ಹೇಳಿದ್ದಾರೆ.

ನಾವು ನೋಡಿದಾಗ ಧ್ರುವನಾರಾಯಣ ಕೋಮಾ ಸ್ಥಿತಿಯಲ್ಲಿದ್ದರು ಎಂದು ತಿಳಿಸಿದ್ದಾರೆ. ನಾಳೆ (ಮಾ.12) ಮಧ್ಯಾಹ್ನ 2 ಗಂಟೆಗೆ ಹುಟ್ಟೂರು ಚಾಮರಾಜನಗರ ತಾಲೂಕಿನ ಹೆಗ್ಗವಾಡಿ ಗ್ರಾಮದಲ್ಲಿ ಧ್ರುವನಾರಾಯಣ ಅಂತ್ಯಕ್ರಿಯೆ ನಡೆಯಲಿದೆ.

ಧ್ರುವ ನಾರಾಯಣ್ ಅವರು 2 ಬಾರಿ ಚಾಮರಾಜನಗರದಿಂದ ಸಂಸದರಾಗಿ ಹಾಗೂ 2 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾಗಿದ್ದ ಅವರು ಮೈಸೂರು ವಿಭಾಗದ ಕಾಂಗ್ರೆಸ್ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇವರಿಗೆ ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!