ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಮಂಡ್ಯ ಭೇಟಿಯು ಕೇವಲ ಭಾಷಣಕ್ಕಷ್ಟೇ ಸೀಮಿತವಾಗಿದೆ. ಮಂಡ್ಯ ಜಿಲ್ಲೆ ಸಮಗ್ರ ಅಭಿವೃದ್ಧಿಗೆ ಪೂರಕವಾಗುವಂತಹ ಯಾವುದೇ ಒಂದು ಘೋಷಣೆಯನ್ನೂ ಅವರು ಮಾಡಿಲ್ಲದಿರುವುದು ನಿರಾಶೆ ಮೂಡಿಸಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ ಹಾಗೂ ಮಧು ಜಿ.ಮಾದೇಗೌಡ ಬೇಸರ ವ್ಯಕ್ತಪಡಿಸಿದ್ದಾರೆ.
ಮಂಡ್ಯ ನಗರವನ್ನು ಸ್ಮಾರ್ಟ್ ಸಿಟಿ ಮಾಡಲು ಸಾಕಷ್ಟು ಅವಕಾಶಗಳಿದ್ದವು. ಮಂಡ್ಯ ಮೆಡಿಕಲ್ ಕಾಲೇಜನ್ನು ದೆಹಲಿಯ ಏಮ್ಸ್ ಮಾದರಿಯಲ್ಲಿ ಮೇಲ್ದರ್ಜೆಗೇರಿಸಬಹುದಿತ್ತು. ರಾಷ್ಟೀಯ ಹೆದ್ದಾರಿಗೆ ಹೊಂದಿ ಕೊಂಡು ಟ್ರಾಮಾಕೇರ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಬಹುದಿತ್ತು, ಐಐಟಿ ಕಾಲೇಜನ್ನು ಘೋಷಣೆ ಮಾಡಬಹುದಿತ್ತು. ಈ ಯಾವುದನ್ನೂ ಮಾಡಲಾಗಿಲ್ಲ. ಇದು ಜಿಲ್ಲೆಯ ಜನತೆಗೆ ನಿರಾಸೆಯನ್ನುಂಟು ಮಾಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.