ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಾವು ಕಚ್ಚಿ ಸಾವನ್ನಪ್ಪಿದ್ದ ರೈತನ ಮನೆಗೆ, ಯುವ ಮುಖಂಡ ಇಂಡುವಾಳು ಸಚ್ಚಿದಾನಂದ ಭೇಟಿ ನೀಡಿ ಸಾಂತ್ವನ ಹೇಳಿ ಪರಿಹಾರ ವಿತರಿಸಿದರು.
ಇಂದು ಶ್ರೀರಂಗಪಟ್ಟಣ ತಾಲ್ಲೂಕಿನ ಪಾಲಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ ಯುವ ನಾಯಕ ಸಚ್ಚಿದಾನಂದ, ಮೃತ ರೈತ ರಂಜು ಅವರ ಮನೆಗೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಜೊತೆಗೆ ಪರಿಹಾರ ನೀಡಿದರು.
ಮನೆಗೆ ಆಧಾರ ಸ್ತಂಭವಾಗಿದ್ಧ ರಂಜು ಚಿಕ್ಕವಯಸ್ಸಿನಲ್ಲೇ ಅಕಾಲಿಕ ಮರಣಕ್ಕೆ ತುತ್ತಾಗಿರುವ ಬಗ್ಗೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಕರೆ ಮಾಡಿ ತಿಳಿಸಿದ್ದಲ್ಲದೆ, ಸರ್ಕಾರದ ವತಿಯಿಂದ ಸಿಗುವ ಪರಿಹಾರ ಕೊಡಿಸುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ಯಜಮಾನರು ಹಾಗೂ ಮುಖಂಡರು ಉಪಸ್ಥಿತರಿದ್ದರು.
ಇದನ್ನು ಓದಿ: ಸದ್ಯಕ್ಕೆ ಪಕ್ಷ ಸೇರ್ಪಡೆ ಮಾತೇ ಇಲ್ಲ : ಸುಮಲತಾ