Friday, September 20, 2024

ಪ್ರಾಯೋಗಿಕ ಆವೃತ್ತಿ

ಕೆರಗೋಡಿನಲ್ಲಿ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಣೆ

ಮಂಡ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮುಖಂಡರಾದ ಎಂ.ಎಸ್.ಚಿದಂಬರ್ ರವರ ನೇತೃತ್ವದಲ್ಲಿ ಗ್ಯಾರಂಟಿ ಕಾರ್ಡ್ ವಿತರಣಾ ಕಾರ್ಯಕ್ರಮ ಮಂಡ್ಯ ತಾಲ್ಲೋಕಿನ ಕೆರಗೋಡು ಗ್ರಾಮದಲ್ಲಿ ನಡೆಯಿತು.

ಕೆರಗೋಡು ಗ್ರಾಮದ ಪ್ರತಿ ಮನೆ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ಮುಖಂಡರಾದ ಎಂ.ಎಸ್.ಚಿದಂಬರ್ ನೇತೃತ್ವದ ತಂಡ ಈ ಬಾರಿಯ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಅಂಶಗಳ ಗ್ಯಾರಂಟಿ ಕಾರ್ಡ್ಗಳನ್ನು ವಿತರಿಸಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಿದರು.

ನಂತರ ಮಾತನಾಡಿದ ಅವರು, ಇಂದು ಮಂಡ್ಯ ವಿಧಾನಸಭಾ ಕ್ಷೇತ್ರದ ಕೆರಗೋಡು 2ನೇ ಬ್ಲಾಕ್‌ನಲ್ಲಿ ನಮ್ಮ ಕಾಂಗ್ರೆಸ್ ಪಕ್ಷದ ಪ್ರಮುಖ ಯೋಜನೆಯಾದಂತಹ ಗ್ಯಾರೆಂಟಿ ಕಾರ್ಡ್‌ಗಳನ್ನು ಪಕ್ಷದ ಮುಖಂಡರು ಪ್ರತಿ ಮನೆ ಮನೆಗೆ ವಿತರಣೆ ಮಾಡಲಾಗುತ್ತಿದ್ದು, ಕಾಂಗ್ರೆಸ್ ಸರ್ಕಾರ ಬಂದ ತಕ್ಷಣ ಪ್ರತಿ ಮನೆ ಗೃಹಿಣಿಗೆ 2 ಸಾವಿರ ಗೃಹಲಕ್ಷ್ಮೀ ಯೋಜನೆ, ಪ್ರತಿ ಮನೆ 200 ಯೂನಿಟ್ ವಿದ್ಯುತ್‌, ಪ್ರತಿಯೊಬ್ಬರಿಗೂ 10 ಕೆ.ಜಿ.ಅಕ್ಕಿಯನ್ನು ನೀಡಲಾಗುವುದು. ಪಕ್ಷದ ಯೋಜನೆಗಳನ್ನು ಹೇಳುವ ಮುಖಾಂತರ ಗ್ಯಾರಂಟಿ ಕಾರ್ಡ್‌ಗಳನ್ನು ವಿತರಣೆ ಮಾಡಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಕೆರಗೋಡು ಗ್ರಾಮದ ಕಾಂಗ್ರೆಸ್ ಮುಖಂಡರು , ಶ್ರೀಕಾಂತ್ ಗೌಡ , ಹರ್ಷಿತ್ ಕೆ.ಎಸ್.
ಮಂಜುನಾಥ್ , ಓಬಿಸಿ ಘಟಕದ ಜಿಲ್ಲಾ ಕಾರ್ಯದರ್ಶಿ , ರಘುನಂದನ್ , ಚಂದನ್ , ರುದ್ರೇಶ್ , ಪಾಪಣ್ಣ , ಸತೀಶ್ , ಲೋಕೇಶ್ ಕೆ.ಎಸ್. ವಿಶ್ವಕರ್ಮ , ಶ್ರೀನಿವಾಸ್, ಅಖಿಲ ಕರ್ನಾಟಕ ಡಿ ಕ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!