ಮುನ್ನೆಚ್ಚರಿಕೆ ಕ್ರಮದೊಂದಿಗೆ ವಿಜೃಂಭಣೆಯ ನಾಳಿನ ವೈರಮುಡಿ ಉತ್ಸವಕ್ಕೆ ಸಿದ್ದತೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ವರಿಷ್ಠಾಧಿಕಾರಿ ಎನ್.ಯತೀಶ್ ತಿಳಿಸಿದರು.
ಶುಕ್ರವಾರ ಮಧ್ಯಾಹ್ನ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಪ್ರತಿ ವರ್ಷದಂತೆ ವಿಜೃಂಭಣೆಯಿಂದ ವೈರಮುಡಿ ಉತ್ಸವ ನಡೆಯಲಿದೆ.
ಜಿಲ್ಲಾಡಳಿತ ಈಗಾಗಲೇ ಸಕಲ ಸಿದ್ದತೆ ಮಾಡಿಕೊಂಡಿದ್ದೆ. ಪೊಲೀಸ್ ಇಲಾಖೆ ಕೂಡ ಎಚ್ಚರಿಕೆ ವಹಿಸಿ, ಮುನ್ನೆಚರಿಕೆ ಕ್ರಮವಾಗಿ, ಯಾವುದೇ ಆಹಿತಕರ ಘಟನೆ ನಡೆಯದಂತೆ ಬ್ಯಾರಿಕ್ಯಾಡ್, ಸಿಸಿಟಿವಿಯನ್ನು ಅಳವಡಿಸಲಾಗಿದೆ.
ಸುಮಾರು 600ಕ್ಕೂ ಹೆಚ್ಚು ಸಿಬ್ಬಂದಿಗಳು ಹಾಗೂ ಅಧಿಕಾರಿಗಳನ್ನು ನಿಯೋಜಿಸಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕ್ರಮ ವಹಿಸಲಾಗಿದೆ ಎಂದರು.
ಮೇಲುಕೋಟೆ ವೈರಮುಡಿ ಉತ್ಸವಕ್ಕೆ ಸಕಲ ಸಿದ್ದತೆ ಮಾಡಿಕೊಂಡಿದ್ದೇವೆ. ಬಂದಂತಹ ಭಕ್ತರು ನಿಯಮಗಳನ್ನು ಪಾಲನೆ ಮಾಡಿ ಸಹಕರಿಸಿ ಎಂದು ಮನವಿ ಮಾಡಿದರು.