ನೀತಿ ಸಂಹಿತೆ ಜಾರಿ ಹಿನ್ನೆಲೆ ಮಾಜಿ ಸಚಿವ ಜನಾರ್ದನ ರೆಡ್ಡಿ ಸಾರ್ವಜನಿಕ ಬಳಕೆಗೆ ನೀಡಲಾಗಿದ್ದ ಉಚಿತ ಆ್ಯಂಬುಲೆನ್ಸ್ನ್ನು ಚುನಾವಣಾ ಅಧಿಕಾರಿಗಳು ಶನಿವಾರ ರಾತ್ರಿ ಜಪ್ತಿ ಮಾಡಿದ್ದಾರೆ. ಜಿಲ್ಲೆಯ ಕನಕಗಿರಿ ಪಟ್ಟಣದಲ್ಲಿರುವ ಅಂಬೇಡ್ಕರ್ ವೃತ್ತದಲ್ಲಿ ಸೀಜ್ ಮಾಡಲಾಗಿದೆ.
ಆ್ಯಂಬುಲೆನ್ಸ್ ಮೇಲೆ ಜನಾರ್ದನರೆಡ್ಡಿ ಮತ್ತು ಪತ್ನಿ ಫೋಟೋ ಹಾಕಲಾಗಿದೆ. ಜಪ್ತಿ ಮಾಡಿ ಕನಕಗಿರಿ ಪೊಲೀಸ್ ಠಾಣಾ ಆವರಣದಲ್ಲಿ ನಿಲ್ಲಿಸಲಾಗಿದ್ದು, ಪ್ರಕರಣ ದಾಖಲಿಸಲು ಚುನಾವಣಾ ಅಧಿಕಾರಿಗಳು ಮುಂದಾಗಿದ್ದಾರೆ.