Thursday, September 19, 2024

ಪ್ರಾಯೋಗಿಕ ಆವೃತ್ತಿ

ರೇಷ್ಮೆಗೆ ಬೆಂಬಲ ಬೆಲೆ ನೀಡಲು ಆಗ್ರಹಿಸಿ ಪ್ರತಿಭಟನೆ

ರೇಷ್ಮೆ ಗೂಡಿಗೆ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ರೈತ ಸಂಘ ಹಾಗೂ ರೇಷ್ಮೆ ಬೆಳೆಗಾರರ ಒಕ್ಕೂಟ ವತಿಯಿಂದ ರೇಷ್ಮೆ ಬೆಳೆಗಾರರು ಹಾಗೂ ರೈತ ಸಂಘದ ಕಾರ್ಯಕರ್ತರು ರೇಷ್ಮೆ ಗೂಡು ಇಟ್ಟು ಮಳವಳ್ಳಿ ತಾಲ್ಲೂಕಿನ ಬುಗತಹಳ್ಳಿ ಬಳಿ ಇರುವ ರೇಷ್ಮೆ ಗೂಡು ಮಾರುಕಟ್ಟೆ ಮುಂಭಾಗ ದಲ್ಲಿ ರಸ್ತೆತಡೆ ನಡೆಸಿ ಪ್ರತಿಭಟನೆ ನಡೆಸಿದರು.

ಈ ವೇಳೆ ಪ್ರತಿಭಟನಾಕಾರರು ಸರ್ಕಾರದ ವಿರುದ್ದ ಘೋಷಣೆ ಕೂಗಿದರು. ರೇಷ್ಮೆ ಬೆಳೆಗಾರರ ಒಕ್ಕೂಟದ ಜಿಲ್ಲಾಧ್ಯಕ್ಷ ಗುಡಿದೊಡ್ಡಿ ಶಿವಲಿಂಗಯ್ಯ ಮಾತನಾಡಿ, ರೇಷ್ಮೆ ಗೂಡು ಬೆಲೆ ಕುಸಿತಗೊಳ್ಳುತ್ತಿದ್ದರೂ ಸರ್ಕಾರ ರೈತರ ಬಗ್ಗೆ ಕಾಳಜಿ ವಹಿಸುತ್ತಿಲ್ಲ, ಕೂಡಲೇ ಬೆಂಬಲ ಬೆಲೆ ನಿಗಿದಿ ಪಡಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವ ಎಚ್ಚರಿಕೆ ನೀಡಿದರು

ಪ್ರತಿಭಟನೆಯಲ್ಲಿ ರೇಷ್ಮೆ ಕ್ಷೇತ್ರಾಭಿವೃದ್ದಿ ಟ್ರಸ್ಟ್ ಜಿಲ್ಲಾಧ್ಯಕ್ಷ ಶಿವಕುಮಾರ್, ಪುಟ್ಟಸ್ವಾಮಿ, ರೈತಸಂಘ ಉಪಾಧ್ಯಕ್ಷ ನಾಗರಾಜು, ನೆಲ್ಲೂರು ಜಯರಾಮು ಸೇರಿದಂತೆ ಹಲವರು ಇದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!