ಕರ್ನಾಟಕ ರಾಜ್ಯ ರೈತಸಂಘದ ಮುಖಂಡರಾಗಿದ್ದ ಮದ್ದೂರು ತಾಲ್ಲೂಕಿನ ಅಜ್ಜಹಳ್ಳಿ ಗ್ರಾಮದ ಮಾದೇಗೌಡ (70) ಅವರು ಇಂದು ಬೆಳಿಗ್ಗೆ ನಿಧನರಾದರು.
ಮೃತರು ಎಂಬತ್ತರ ದಶಕದಿಂದಲೂ ರೈತ ಚಳವಳಿಯಲ್ಲಿ ತೊಡಗಿಸಿಕೊಂಡಿದ್ದರು. ಮೃತರು ಪತ್ನಿ ಸುನಂದಮ್ಮ ಹಾಗು ಇಬ್ಬರು ಗಂಡು ಮಕ್ಕಳು ಇಬ್ಬರು ಹೆಣ್ಣು ಮಕ್ಕಳು ಸೇರಿದಂತೆ ಬಂಧು ಬಳಗ ಹಾಗು ಅಸಂಖ್ಯಾತ ರೈತ ಕಾರ್ಯಕರ್ತರನ್ನು ಅಗಲಿದ್ದಾರೆ