ನಟ ಸುದೀಪ್ ಚಲನಚಿತ್ರಗಳು ಹಾಗೂ ಜಾಹೀರಾತುಗಳಿಗೆ ನಿರ್ಬಂಧ ಹೇರುವಂತೆ ಚುನಾವಣಾ ಆಯೋಗಕ್ಕೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಮನವಿ ಮಾಡಿದ್ದಾರೆ.
ನಟ ಸುದೀಪ್ ಬಿಜೆಪಿಯೊಂದಿಗೆ ಗುರುತಿಸಿಕೊಂಡಿರುವುದರಿಂದ ಅವರ ಎಲ್ಲಾ ಚಲನಚಿತ್ರಗಳು ಹಾಗೂ ಜಾಹೀರಾತುಗಳನ್ನು ಚುನಾವಣೆ ಮುಗಿಯುವವರೆಗೆ ನಿಷೇಧಿಸಬೇಕೆಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಬಿಜೆಪಿ ಸಮಾವೇಶಗಳಲ್ಲಿ ಖಾಲಿ ಚೇರ್ಗಳನ್ನು ನೋಡಬಹುದಾಗಿದೆ. ಹೀಗಾಗಿ ಸಿನಿಮಾ ನಟರನ್ನು ಚುನಾವಣಾ ಪ್ರಚಾರಕ್ಕೆ ಕರೆತರುತ್ತಿದ್ದಾರೆ. ಸಿನಿಮಾನೇ ಬೇರೆ, ರಾಜಕೀಯವೇ ಬೇರೆ ಎಂದು ರಣದೀಪ್ ಸುರ್ಜೇವಾಲ ಬಿಜೆಪಿ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.