Friday, September 20, 2024

ಪ್ರಾಯೋಗಿಕ ಆವೃತ್ತಿ

ಸ್ಪರ್ಧೆಯಿಂದ ಹಿಂದೆ ಸರಿಯುವ ಮಾತೇ ಇಲ್ಲ : ವಿಜಯ್ ಆನಂದ್

ಮಂಡ್ಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಬಂಡಾಯ ಅಭ್ಯರ್ಥಿಯಾಗಿ ತಾವು ನಾಮಪತ್ರ ಸಲ್ಲಿಸಿದ್ದು ಯಾವುದೇ ಕಾರಣಕ್ಕೂ ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ವಿಜಯ್ ಆನಂದ್ ಸ್ಪಷ್ಟಪಡಿಸಿದ್ದಾರೆ.

ಮಂಡ್ಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿ.ಫಾರಂ ನನಗೆ ಸಿಗತ್ತದೆ ಎಂಬ ನಿರೀಕ್ಷೆಯಲ್ಲಿದ್ದೆ, ಆದರೆ ಟಿಕೆಟ್ ತಪ್ಪಿದ್ದನ್ನ ಊಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಈಗಾಗಲೇ ಟಿಕೆಟ್ ಘೋಷಣೆಯಾಗಿದೆ. ಇದಕ್ಕೆ ಯಾರಾದರೂ ಕಾರಣರಾಗಿರಲಿ, ಆದರೆ ನನಗೆ ಅನ್ಯಾಯವಾಗಿದೆ ಎಂದು ಅಳಲು ತೋಡಿಕೊಂಡರು.

ನಮ್ಮ ಕುಟುಂಬ ಜಿಲ್ಲೆಗೆ ಒಂದಷ್ಟು ಸೇವೆಯನ್ನು ಮಾಡಿದೆ, ನಮ್ಮ ಕುಟುಂಬಕ್ಕೆ ಅನ್ಯಾಯವಾಗಿದೆ, ನಾವು ಇಂದಿಗೂ ಬಾಡಿಗೆ ಮನೆಯಲ್ಲೇ ವಾಸಿಸುತ್ತಿದ್ದೇವೆ, ನಮ್ಮ ನೋವನ್ನು ಹೇಳಿಕೊಳ್ಳಲು ಸಾಧ್ಯವಿಲ್ಲ. ಈಗ ನಾನು ಮತದಾರ ಬಳಿಗೆ ಹೋಗುತ್ತೇವೆ, ಅವರನ್ನೇ ಒಂದು ಅವಕಾಶ ಕೊಡಿ ಎಂದು ಕೇಳುತ್ತೇನೆ ಎಂದರು.

ಸ್ವಾಭಿಮಾನಿ ಬಣದಿಂದ ನಾನು ಸೇರಿದಂತೆ, ಹೆಚ್.ಎನ್.ಯೋಗೇಶ್, ಮಹಾಲಿಂಗೇಗೌಡ ಅವರು ನಾಮಪತ್ರ ಸಲ್ಲಿಸಿದ್ದೇವೆ, ಅಂತಿಮವಾಗಿ ಮೂವರಲ್ಲಿ ಒಬ್ಬರು ಕಣದಲ್ಲಿ ಉಳಿಯುತ್ತೇವೆ ಎಂದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!