Friday, September 20, 2024

ಪ್ರಾಯೋಗಿಕ ಆವೃತ್ತಿ

ಶ್ರೀರಂಗಪಟ್ಟಣ | ತಗ್ಗಹಳ್ಳಿ ವೆಂಕಟೇಶ್ ಪರ ಬಿರುಸಿನ ಪ್ರಚಾರ

ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಪಕ್ಷೇತರ ಅಭ್ಯರ್ಥಿ ತಗ್ಗಹಳ್ಳಿ ವೆಂಕಟೇಶ್ ಪರವಾಗಿ ಅವರ ಬೆಂಬಲಿಗರು ಬಿರುಸಿನ ಪ್ರಚಾರ ನಡೆಸಿದರು.

ಕ್ಷೇತ್ರ ವ್ಯಾಪ್ತಿಯ ಅರಕರೆ ಗ್ರಾಮದಲ್ಲಿ ಮನೆ ಮನೆಗೆ ಭೇಟಿ ನೀಡಿ ತಗ್ಗಹಳ್ಳಿ ವೆಂಕಟೇಶ್ ಬೆಂಬಲಿಗರು ಮತಯಾಚನೆ ನಡೆಸಿದರು. ಕೆಲವು ಕಡೆಗಳಲ್ಲಿ ಚುನಾವಣೆ ಖರ್ಚಿಗಾಗಿ ಮತದಾರರೇ ಧನ ಸಹಾಯ ಮಾಡಿದ ದೃಶ್ಯಗಳು ಕಂಡು ಬಂದವು.

ಜೆಡಿಎಸ್ ಪಕ್ಷದಲ್ಲಿ ಗುರುತಿಸಿ ಕೊಂಡಿದ್ದ ತಗ್ಗಹಳ್ಳಿ ವೆಂಕಟೇಶ್ ಅವರಿಗೆ ಪಕ್ಷ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಅವರು ಪಕ್ಷೇತರವಾಗಿ ಕಣಕ್ಕೀಳಿದಿದ್ದು, ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!