Thursday, September 19, 2024

ಪ್ರಾಯೋಗಿಕ ಆವೃತ್ತಿ

ಪಂಚರತ್ನ ಯೋಜನೆಗಳಿಂದ ನಾಡಿನ ಜನರ ಬದುಕು ಬದಲಾವಣೆ : ರಘುನಂದನ್

ಹೆಚ್.ಡಿ.ಕುಮಾರಸ್ವಾಮಿಯವರ ಪಂಚರತ್ನ ಯೋಜನೆಗಳಿಂದ ನಾಡಿನ ಜನರ ಬದುಕು ಬದಲಾವಣೆಯಾಗಲಿದೆ ಎಂದು ಮನ್ಮುಲ್ ಉಪಾಧ್ಯಕ್ಷ ಹಾಗೂ ಜೆಡಿಎಸ್ ಜಿಲ್ಲಾ ವಕ್ತಾರ‌ ಎಂ.ಎಸ್.ರಘುನಂದನ್ ಹೇಳಿದರು.

ಮಂಡ್ಯ ತಾಲೂಕಿನ ಕೀಲಾರ ಗ್ರಾಮದಲ್ಲಿ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು,
ಕುಮಾರಸ್ವಾಮಿಯವರು ಗ್ರಾಮೀಣ ಭಾಗದ ಅಭಿವೃದ್ಧಿಯ ದೂರ ದೃಷ್ಟಿ ಇಟ್ಟುಕೊಂಡು ಪಂಚರತ್ನ  ಯೋಜನೆ ಯನ್ನು ರೂಪಿಸಿದ್ದಾರೆ. ವೃದ್ಧಾಪ್ಯ ವೇತನ ಹೆಚ್ಚಳ, ಅಂಗವಿಕಲರ ವೇತನ ಹೆಚ್ಚಳ, ವಿದ್ಯಾರ್ಥಿನಿಯರಿಗೆ ದ್ವಿಚಕ್ರ ವಾಹನ ವಿತರಣೆ, ರೈತ ಬಂಧು ಯೋಜನೆ, ಆಟೋ ಚಾಲಕರಿಗೆ 2000 ಮಾಸಾಸನ ವರ್ಷಕ್ಕೆ 5 ಸಿಲಿಂಡರ್ ಗಳನ್ನು ಉಚಿತ ನೀಡುವ ಉಚಿತವಾಗಿ ನೀಡುವ ಯೋಜನೆಯನ್ನು ರೂಪಿಸಿದ್ದಾರೆ ಎಂದರು.

ಜೆಡಿಎಸ್ ಅಭ್ಯರ್ಥಿ ಬಿ.ಆರ್. ರಾಮಚಂದ್ರ ಅವರು, ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನ ಮಾಡಿದ್ದಾರೆ. ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಭದ್ರ ಬುನಾದಿಯಾಗಿದ್ದು ಅಭ್ಯರ್ಥಿ ಗೆಲ್ಲುವುದರಲ್ಲಿ ಯಾವುದೇ ಸಂಶಯವಿಲ್ಲ. ಕೀಲಾರ ಗ್ರಾಮದಲ್ಲಿ ಪ್ರತಿ ಮನೆಮನೆಗೂ ಜೆಡಿಎಸ್ ಕಾರ್ಯಕರ್ತರಿದ್ದಾರೆ ಕೀಲಾರ ಗ್ರಾಮ ಜೆಡಿಎಸ್ ಭದ್ರಕೋಟೆಯಾಗಿದೆ. ಈ ಬಾರಿ ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ, ಜಯಗಳಿಸಲಿದ್ದು ರಾಜ್ಯದಲ್ಲಿ ಕುಮಾರಸ್ವಾಮಿಯವರ ಸರ್ಕಾರ ರಚನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಅಭ್ಯರ್ಥಿ ಬಿ.ಆರ್. ರಾಮಚಂದ್ರ ಅವರ ಪತ್ನಿ ಕಲ್ಪನಾ ರಾಮಚಂದ್ರ, ರಾಜು, ಕೀಲಾರ ಸುನೀಲ್, ಗ್ರಾ.ಪಂ. ಮಾಜಿ ಅಧ್ಯಕ್ಷ ವಸಂತರಾಜು, ಎಪಿಎಂಸಿ ಮಾಜಿ ನಿರ್ದೇಶಕ ಶಾಮೀಲ್ ಕೃಷ್ಣಪ್ಪ, ಗ್ರಾ.ಪಂ. ಸದಸ್ಯರಾದ ರಾಜೇಶ್, ಕುಮಾರ್, ಎಪಿಎಂಸಿ ಮಾಜಿ ಅಧ್ಯಕ್ಷ ಕೀಲಾರ ಚಂದ್ರಣ್ಣ  ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!