ಮೈಸೂರು ಮೂಲದ ಯುವಕನೊಬ್ಬ ಕಾವೇರಿ ನದಿಯಲ್ಲಿ ಬಿದ್ದು ಕೊಚ್ಚಿ ಹೋಗಿರುವ ಕುರಿತು ಕೆ.ಆರ್.ಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಡುವಾರಹಳ್ಳಿಯ ವಿನಾಯಕ ನಗರದ ಸೃಜನ್ (20) ನದಿಯಲ್ಲಿ ನಾಪತ್ತೆಯಾಗಿದ್ದು, ಬುಧವಾರ ಸಂಜೆ ಪತ್ತೆಗಾಗಿ ಪೊಲೀಸರು ಮನವಿ ಮಾಡಿದ್ದಾರೆ.
ಕಳೆದ ವರ್ಷ ಜುಲೈ 12ರಂದು ಮನೆಯಿಂದ ಹೋದವನು ನದಿಯಲ್ಲಿ ನಾಪತ್ತೆಯಾಗಿರುವ ಬಗ್ಗೆ ಯುವಕನ ತಂದೆ ದೂರು ನೀಡಿದ್ದಾರೆ.
ಕಾಣೆಯಾದ ಯುವಕ ಕೋಲುಮುಖ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು, ಬಲದ ಕೈಯಲ್ಲಿ ವಿ ಎಂದು ಹಸಿರು ಹಚ್ಚೆ ಹಾಕಿಸಿರುತ್ತಾರೆ. ಮನೆಯಿಂದ ಹೋಗುವಾಗ ನೇರಳೆ ಬಣ್ಣದ ಟೀ-ಶರ್ಟ್, ನೀಲಿ ಬಣ್ಣದ ಟ್ರಾಕ್ ಪ್ಯಾಂಟ್ ಧರಿಸಿರುತ್ತಾರೆ.
ಇವರ ಸುಳಿವು ಸಿಕ್ಕಲ್ಲಿ ಕೆ.ಆರ್ ಸಾಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಲು ಕೆ.ಆರ್ ಸಾಗರ ಪೋಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಆಫ್ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.