ಸಚಿವ ಎನ್.ಚಲುವರಾಯಸ್ವಾಮಿ ಸ್ವಾಗತದ ಫ್ಲೆಕ್ಸ್ ಗಳನ್ನು ಮದ್ದೂರು ಪಟ್ಟಣದ ಹೆದ್ದಾರಿಯಲ್ಲಿ ಕಿಡಿಗೇಡಿಗಳು ಹರಿದು ಹಾಕಿರುವ ಘಟನೆ ಶುಕ್ರವಾರ ತಡರಾತ್ರಿ ಜರುಗಿದೆ.
ನೂತನ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ವಿಧಾನ ಪರಿಷತ್ ಸದಸ್ಯರಾದ ಮಧುಜಿಮಾದೇಗೌಡ ಹಾಗೂ ದಿನೇಶ್ಗೂಳಿಗೌಡ ಅವರ ಫೆಕ್ಸ್ಗಳನ್ನು ಮೈಸೂರು-ಬೆಂಗಳೂರು ಹೆದ್ದಾರಿಯ ಮಾರ್ಗದುದ್ದಕ್ಕೂ ಹಾಕಿದ್ದು, ಶಾಸಕ ಕದಲೂರು ಉದಯ್ ಅವರ ಭಾವಚಿತ್ರವನ್ನು ಹಾಕಿಲ್ಲ ಎಂಬ ಕಾರಣಕ್ಕೆ ಫೆಕ್ಸ್ ಬ್ಯಾನರ್ ಗಳನ್ನು ಯಾರೋ ಕಿಡಿಗೇಡಿಗಳು ಹರಿದು ಹಾಕಿರುವ ಘಟನೆ ಮದ್ದೂರು ಪಟ್ಟಣದಲ್ಲಿ ಶುಕ್ರವಾರ ತಡರಾತ್ರಿ ಜರುಗಿದೆ.
ನೂತನ ಸಚಿವ ಎನ್.ಚಲುವರಾಯಸ್ವಾಮಿ ಅವರು ಜಿಲ್ಲೆ ಹಾಗೂ ತಾಲ್ಲೂಕಿಗೆ ಆಗಮಿಸುತ್ತಿದ್ದ ಹಿನ್ನೆಲೆಯಲ್ಲಿ ಸ್ಥಳೀಯ ಶಾಸಕ ಉದಯ್ ಅವರ ಭಾವಚಿತ್ರಗಳನ್ನು ಫ್ಲೆಕ್ಸ್ ಬ್ಯಾನರ್ ಗಳಲ್ಲಿ ಅಳವಡಿಸಲಿಲ್ಲವೆಂಬ ಸದುದ್ದೇಶದಿಂದ ರಾತ್ರಿ ವೇಳೆ ಬ್ಯಾನರ್ ಗಳನ್ನು ಹರಿದು ಹಾಕಿವುದಾಗಿ ತಿಳಿದು ಬಂದಿದೆ.
ಇಂತಹ ಕೃತ್ಯಗಳನ್ನು ಮಾಡಿದ ಕಿಡಿಗೇಡಿಗಳ ವಿರುದ್ದ ಕಾನೂನು ಕ್ರಮವಹಿಸಬೇಕೆಂದು ಮಧುಜಿಮಾದೇಗೌಡರ ಅಭಿಮಾನಿಗಳು ಆಗ್ರಹಿಸಿದ್ದಾರೆ.
ಈ ಸಂಬಂಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.