Thursday, September 19, 2024

ಪ್ರಾಯೋಗಿಕ ಆವೃತ್ತಿ

ಶಾಸಕ ಹೆಚ್.ಟಿ.ಮಂಜು ಹುಟ್ಟುಹಬ್ಬ ; ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ

ಕೆ .ಆರ್ .ಪೇಟೆ ಕ್ಷೇತ್ರದ ಶಾಸಕ ಹೆಚ್.ಟಿ.ಮಂಜು ಅವರ 49ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ  ಅಗ್ರಹಾರ ಬಾಚಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯರಾದ  ರಮಾನಂದ್ ಅವರು ತಾಲ್ಲೂಕಿನ ವಳಗೆರೆಮೆಣಸ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಲೇಖನ ಸಾಮಗ್ರಿ ಹಾಗೂ ನೋಟ್ ಪುಸ್ತಕಗಳನ್ನು ವಿತರಣೆ ಮಾಡಿದರು.
ಈ ವೇಳೆ ಮಾತನಾಡಿದ ರಮಾನಂದ್, ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ಶಾಲೆಯ ಹಿರಿಯ ವಿದ್ಯಾರ್ಥಿಗಳು ಕೈಜೋಡಿಸಬೇಕು. ಸರ್ಕಾರಿ ಶಾಲೆಯಲ್ಲಿ ಉಚಿತವಾಗಿ ಸಮವಸ್ತ್ರ, ಪಠ್ಯಪುಸ್ತಕ, ಶೂ, ಸಾಕ್ಸ್, ಬಿಸಿಯೂಟ. ನೀಡಲಾಗುತ್ತಿದೆ. ಹಾಗಾಗಿ ಪೋಷಕರು ತಮ್ಮ ಮಕ್ಕಳನ್ನು ತಮ್ಮ ಗ್ರಾಮದ ಸರ್ಕಾರಿ ಶಾಲೆಗಳಿಗೆ ಸೇರಿಸಬೇಕೆಂದು ಮನವಿ ಮಾಡಿದರು.
ತಾ.ಪಂ. ಮಾಜಿ ಅಧ್ಯಕ್ಷ ವಿ.ಎನ್.ಮಹದೇವೇಗೌಡ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ಅಗ್ರಹಾರಬಾಚಹಳ್ಳಿ ಪ್ರದೀಪ್,ಮುಖಂಡ ಶಂಕರ್, ಕಿರಣ್ ಕುಮಾರ್, ಲೋಕೇಶ್, ಮುಖ್ಯ ಶಿಕ್ಷಕ ಕುಮಾರ್, ಸರ್ಕಾರಿ ನೌಕರರ ತಾಲ್ಲೂಕು ಘಟಕದ ಅಧ್ಯಕ್ಷ ಶಿವರಾಮೇಗೌಡ, ಸಹಶಿಕ್ಷಕಿ ಎಂ ಎಸ್ ರಾಗಿಣಿ , ಸಾವಿತ್ರಿ ವಳಗೆರೆಮೆಣಸ ಹಾಗೂ  ಗ್ರಾ.ಪಂ.ಸದಸ್ಯರು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!