ಹೆತ್ತ ತಾಯಿಯಿಂದ ದೂರವಿದ್ದ ಮಗುವನ್ನು ತಾಯಿ ಮಡಿಲಿಗೆ ಸೇರಿಸಿರುವ ಘಟನೆಯು ಮದ್ದೂರು ತಾಲ್ಲೂಕಿನಲ್ಲಿ ಬೆಳಕಿಗೆ ಬಂದಿದೆ.
ಮದ್ದೂರು ತಾಲೂಕಿನ ಕೆ ಮಲ್ಲಿಗೆರೆ ಗ್ರಾಮದಲ್ಲಿ ಹೆತ್ತ ಮಗುವಿಗಾಗಿ ತಾಯಿಯೊಬ್ಬಳು ಧ್ವನಿ ಸಂಸ್ಥೆಯ ಮಹಿಳಾ ಅಧ್ಯಕ್ಷ ರಜಿನಿರಾಜ್ ಅವರಿಗೆ ದೂರವಾಣಿ ಕರೆ ಮಾಡಿ ತಮ್ಮ ಅಳಲನ್ನು ತೋಡಿಕೊಂಡರು.
ಈ ಪ್ರಕರಣವನ್ನು ಸಂಪೂರ್ಣವಾಗಿ ಬಗೆಹರಿಸಲು ಪಣತೊಟ್ಟ ರಜಿನಿರಾಜ್ ಅವರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಹಾಗೂ ಕೊಪ್ಪ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳ ಸಹಕಾರದೊಂದಿಗೆ ಕಾನೂನಾತ್ಮಕವಾಗಿ ರಕ್ಷಣೆ ನೀಡಲು ಮುಂದಾದರು.
ಮಗುವಿನ ತಾಯಿ ಪ್ರೇಮ ಅವರನ್ನು ಸಂಪರ್ಕಿಸಿ ಸಂಪೂರ್ಣ ಮಾಹಿತಿ ಪಡೆದು, ತಾಯಿಯ ಮನೆಯಲ್ಲಿ ಆಶ್ರಯ ಪಡೆದಿದ್ದ ಪ್ರೇಮಾರನ್ನು ಭೇಟಿ ಮಾಡಿ ಪ್ರೇಮಾಳ ಪತಿಗೆ ಕಾನೂನಾತ್ಮಕ ವಿಚಾರಗಳನ್ನು ತಿಳಿಸಿ ಮಗುವನ್ನು ತಾಯಿ ಮಡಿಲಿಗೆ ಸೇರಿಸಿದ್ದಾರೆ.
ಪ್ರೇಮಾಳ ಅತ್ತೆ ಮನೆಯಲ್ಲಿ ಇದ್ದ ಮಗುವನ್ನು ತಾಯಿ ಮಡಿಲಿಗೆ ಸೇರಿಸಿದ ಖುಷಿ ಧ್ವನಿ ಸಂಸ್ಥೆಯ ರಜಿನಿರಾಜ್ ಅವರ ಸೇವಾ ಕಾರ್ಯವಾಗಿದೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.