Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಉಡುಪಿ ಪ್ರಕರಣ ಸಿಓಡಿ ತನಿಖೆಗೆ ಆಗ್ರಹ

ಉಡುಪಿ ವೈದ್ಯ ವಿದ್ಯಾರ್ಥಿನಿಯ ಖಾಸಗಿ ವಿಡಿಯೋ ಮಾಡಿದ ಮೂವರು ವಿದ್ಯಾರ್ಥಿನಿಯರನ್ನು ಬಂಧಿಸಿ ಸಿಓಡಿ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿ ಬಿಜೆಪಿ‌ ಮಹಿಳಾ ಮೋರ್ಚಾ ವತಿಯಿಂದ ನಗರದ ಡಿಸಿ ಕಚೇರಿ ಮುಂದೆ ಪ್ರತಿಭಟಿಸಲಾಯಿತು.

ಶುಕ್ರವಾರ ಬೆಳಿಗ್ಗೆ 11.30 ಗಂಟೆಯಲ್ಲಿ ಜಮಾವಣೆಗೊಂಡ ಬಿಜೆಪಿ ಮಹಿಳಾ ಮುಖಂಡರು ಹಾಗೂ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿದರು‌.

ಉಡುಪಿಯ ಜ್ಯೋತಿ ನರ್ಸಿಂಗ್ ಹೋಂನಲ್ಲಿ ಹಿಂದೂ ಹೆಣ್ಣು ಮಕ್ಕಳ ವೈಯುಕ್ತಿಕ ಚಿತ್ರವನ್ನು ಶೌಚಾಲಯದಲ್ಲಿ ಹಿಡನ್ ಕ್ಯಾಮರಾ ಇಟ್ಟು ಚಿತ್ರಿಕರಿಸಿರುವ ಅನ್ಯ ಕೋಮಿನ ವಿದ್ಯಾರ್ಥಿನಿಯರ ವಿರುದ್ದ ಎಫ್’ಐಆರ್ ದಾಖಲಿಸಿದ್ದರೂ ಬಂಧಿಸಿಲ್ಲ ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಮುಡಾ ಮಾಜಿ ಅಧ್ಯಕ್ಷೆ ವಿದ್ಯಾನಾಗೇಂದ್ರ, ಮನ್’ಮುಲ್ ನಿರ್ದೇಶಕಿ ರೂಪ, ಯಶೋದಮ್ಮ, ಸುಜಾತಕೃಷ್ಣ, ಸುಕನ್ಯ, ಶ್ವೇತಾ, ಮಮತ, ರಂಜಿತಾ ಮೊದಲಾದವರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!