ಮಂಡ್ಯ ವಿಧಾನಸಭಾ ಕ್ಷೇತ್ರದ ಕಸಬಾ ಹೋಬಳಿಯ ಮಲ್ಲಯ್ಯನದೊಡ್ಡಿ ಗ್ರಾಮಕ್ಕೆ ತೆರಳಿದ ಮನ್ ಮುಲ್ ಮಾಜಿ ಅಧ್ಯಕ್ಷ ಹಾಗೂ ಶ್ರೀ ಶಂಭು ಸೇವಾ ಟ್ರಸ್ಟ್ ಅಧ್ಯಕ್ಷ ಬಿ.ಆರ್ ರಾಮಚಂದ್ರು ಭೇಟಿ ನೀಡಿ ಗ್ರಾಮದೇವತೆ ಮಾರಮ್ಮದೇವಿ ದರ್ಶನ ಪಡೆದು ಕಳೆದ ಚುನಾವಣೆಯಲ್ಲಿ ಬೆಂಬಲಿಸಿದ್ದಕ್ಕಾಗಿ ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ನನಗೆ ಮತ ನೀಡಿದ ಎಲ್ಲಾ ಮತದಾರರಿಗೆ ಧನ್ಯವಾದ ಸಲ್ಲಿಸುತ್ತೇನೆ.ಮುಂದೆಯೂ ನಿಮ್ಮ ಮನೆ ಮಗನಾಗಿ ನಿಮ್ಮಗಳ ಸೇವೆ ಮಾಡುತ್ತೇನೆ.ಯಾವ ಕೆಲಸವೇ ಇರಲಿ ಜನರು ನನ್ನ ಬಳಿಗೆ ಬಂದರೆ ಪ್ರಾಮಾಣಿಕವಾಗಿ ಬಗೆಹರಿಸಲು ಪ್ರಯತ್ನಿಸುತ್ತೇನೆ.ಜನರ ಕಷ್ಟ-ಸುಖದಲ್ಲಿ ಭಾಗಿಯಾಗುತ್ತೇನೆ ಎಂದರು.
ಇದೇ ಸಂದರ್ಭದಲ್ಲಿ ಶ್ರೀ ಶಂಭು ಸೇವಾ ಟ್ರಸ್ಟ್ ವತಿಯಿಂದ ಉಚಿತವಾಗಿ ಹಾಟ್ ಬಾಕ್ಸ್ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಜೆಡಿಎಸ್ ಕಾರ್ಯಾಧ್ಯಕ್ಷ ಬೂದನೂರು ಸ್ವಾಮಿ, ಅಭಿಷೇಕ್, ಶ್ರೀಧರ್, ಚಂದನ್, ಮಲ್ಲಯ್ಯನದೊಡ್ಡಿ ಗ್ರಾಮದ ಯುವಕ ಮಿತ್ರರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.