ಅಖಿಲ ಕರ್ನಾಟಕ ಶ್ರೀಮಂಜುನಾಥಸ್ವಾಮಿ ಭಕ್ತ ವೃಂದದ ವತಿಯಿಂದ ಶುಕ್ರವಾರ ಉಜಿರೆಯಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ತಮ್ಮ ಮೇಲೆ ವೀರೇಂದ್ರ ಹೆಗಡೆ ಬೆಂಬಲಿಗರಿಂದ ಹಲ್ಲೆ ಯತ್ನ ನಡೆದಿದೆ ಎಂದು ಆರೋಪಿಸಿ ಸೌಜನ್ಯ ತಾಯಿ ಕುಸುಮಾವತಿಯವರು ದೂರು ಸಲ್ಲಿಸಿದ್ದಾರೆ.
ಪ್ರತಿಭಟನೆಯಲ್ಲಿ ಸೌಜನ್ಯ ತಾಯಿ ಕುಸುಮಾವತಿ ಮತ್ತು ಅವರ ಕುಟುಂಬ ಸದಸ್ಯರು ಕಾಣಿಸಿಕೊಂಡಿದ್ದರು. ಈ ವೇಳೆ ಪ್ರತಿಭಟನಾನಿರತನೊಬ್ಬ ಕುಟುಂಬ ಸದಸ್ಯರ ಮೇಲೆ ಹಲ್ಲೆ ಮಾಡಲು ಯತ್ನಿಸಿದ್ದ. ಘಟನೆಯ ವಿಡಿಯೋ ಕೂಡ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿತ್ತು. ಈ ಹಿನ್ನೆಲೆಯಲ್ಲಿ ಸೌಜನ್ಯ ತಾಯಿ ಮಾನಹಾನಿಗೆ ಯತ್ನ ಮಾಡಿದ್ದಾರೆಂದು ಪೊಲೀಸರಿಗೆ ದೂರು ನೀಡಿದ್ದಾರೆ.
ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ಕುಸುಮಾವತಿ, ‘ಅಪರಿಚಿತ ವ್ಯಕ್ತಿ ಹಾಗೂ ಇತರರು ತನ್ನ ಮೇಲೆ ಮಾನಹಾನಿಗೆ ಯತ್ನಿಸಿದ್ದಾರೆ. ಅಲ್ಲದೇ, ತನ್ನ ಮಗನಿಗೆ ಹಲ್ಲೆ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ.
ಸೌಜನ್ಯ ಕುಟುಂಬದ ರಕ್ಷಣೆಗೆ ನಮ್ಮ ಸರ್ಕಾರ ಬದ್ದವಾಗಿದೆ – ಕಾಂಗ್ರೆಸ್
ಧರ್ಮವೆಂದರೆ ನ್ಯಾಯ, ನ್ಯಾಯವನ್ನು ಕೇಳುವುದು ಕೂಡ ಧರ್ಮವೇ..
ಸೌಜನ್ಯ ಕುಟುಂಬದ ರಕ್ಷಣೆಗೆ ನಮ್ಮ ಸರ್ಕಾರ ಬದ್ದವಾಗಿದೆ, ಸಂತ್ರಸ್ತ ಕುಟುಂಬದ ಮೇಲಿನ ಹಲ್ಲೆ, ಬೆದರಿಕೆಗಳನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ.
ನೊಂದ ಕುಟುಂಬದ ಮೇಲೆ ದಬ್ಬಾಳಿಕೆ ನಡೆಸುವುದನ್ನು ಧರ್ಮ ಎನ್ನಲಾಗದು. ಪೊಲೀಸರು ಸೌಜನ್ಯ ಕುಟುಂಬಕ್ಕೆ ಸೂಕ್ತ ರಕ್ಷಣೆ… pic.twitter.com/uppxGZvElT
— Karnataka Congress (@INCKarnataka) August 4, 2023
“>
ಧರ್ಮವೆಂದರೆ ನ್ಯಾಯ, ನ್ಯಾಯವನ್ನು ಕೇಳುವುದು ಕೂಡ ಧರ್ಮವೇ.. ಸೌಜನ್ಯ ಕುಟುಂಬದ ರಕ್ಷಣೆಗೆ ನಮ್ಮ ಸರ್ಕಾರ ಬದ್ದವಾಗಿದೆ, ಸಂತ್ರಸ್ತ ಕುಟುಂಬದ ಮೇಲಿನ ಹಲ್ಲೆ, ಬೆದರಿಕೆಗಳನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ನೊಂದ ಕುಟುಂಬದ ಮೇಲೆ ದಬ್ಬಾಳಿಕೆ ನಡೆಸುವುದನ್ನು ಧರ್ಮ ಎನ್ನಲಾಗದು. ಪೊಲೀಸರು ಸೌಜನ್ಯ ಕುಟುಂಬಕ್ಕೆ ಸೂಕ್ತ ರಕ್ಷಣೆ ಒದಗಿಸಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷವು ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿದೆ.