ಹಿಂದಿ ಹಾಗೂ ತಮಿಳು ಕಿರುತೆರೆಯ ಕಲಾವಿದರಾಗಿ ಮುಂಚುತ್ತಿದ್ದ ಮೂಲತಃ ಕೆ.ಆರ್.ಪೇಟೆ ತಾಲ್ಲೂಕಿನ ಕಿರುತೆರೆ ಕಲಾವಿದ ಪವನ್ (24) ಹೃದಯಘಾತದಿಂದ ಮೃತಪಟ್ಟಿದ್ದಾರೆ.
ಕೆ.ಆರ್.ಪೇಟೆ ತಾಲೂಕಿನ ಹರಿಹರಪುರ ಗ್ರಾಮದ ನಾಗರಾಜು ಮತ್ತು ಸರಸ್ವತಿಯ ಪುತ್ರ ಪರಭಾಷೆಯ (ಹಿಂದಿ. ತಮಿಳು)ಕಿರುತೆರೆಯ ಕಲಾವಿದರಾಗಿ ಹೊರಹೊಮ್ಮುತ್ತಿದ ಪವನ್(25) ಮುಂಬೈ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಗುರುವಾರ ಮುಂಜಾನೆ 5:00 ಗಂಟೆಗೆ ತೀವ್ರ ಹೃದಯಘಾತದಿಂದ ಕೊನೆ ಉಸಿರೆಳೆದಿದ್ದಾರೆ.
ತನ್ನ ದೇಹ ಆಕರ್ಷಣೆಗಾಗಿ ಅತಿಯಾದ ವ್ಯಾಯಮಕ್ಕೆ (ಜಿಮ್)ತಲ್ಲಿನರಾಗಿದ್ದ ಕಾರಣವೇ ಈ ಘಟನೆಗೆ ಕಾರಣವಾಗಿದೆ ಎಂದು ಕುಟುಂಬಸ್ಥರ ಮೂಲಗಳು ತಿಳಿಸಿವೆ. ಮೃತರ ಮೃತದೇಹವು ಮುಂಬೈನ ಆಸ್ಪತ್ರೆಯಲ್ಲಿದ್ದು ಮರಣೋತ್ತರ ಪರೀಕ್ಷೆ ನಂತರ ಶುಕ್ರವಾರ (ಆ.18) ಬೆಳಿಗ್ಗೆ 10 ಗಂಟೆಗೆ ಹರಿಹರಪುರದಲ್ಲಿರುವ ಮೃತರ ತಮ್ಮ ಜಮೀನಿನಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಕಲಾವಿದ ಪವನ್ ಸಾವಿಗೆ ಶಾಸಕ ಹೆಚ್.ಟಿ. ಮಂಜು, ಮಾಜಿ ಸಚಿವ ಕೆ.ಸಿ ನಾರಾಯಣಗೌಡ,ಮಾಜಿ ಶಾಸಕ ಕೆ.ಬಿ ಚಂದ್ರಶೇಖರ, ಮಾಜಿ ಶಾಸಕ ಬಿ ಪ್ರಕಾಶ್, ಟಿ ಎ ಪಿ ಸಿ ಎಂ ಎಸ್ ಅಧ್ಯಕ್ಷ ಬಿ ಎಲ್ ದೇವರಾಜು,ಮನ್ಮುಲ್ ನಿರ್ದೇಶಕ ಡಾಲು ರವಿ, ಕಾಂಗ್ರೆಸ್ ಮುಖಂಡ ಬೂಕನಕೆರೆ ವಿಜಯ ರಾಮೇಗೌಡ, ಸಮಾಜ ಸೇವಕ ಆರ್ ಟಿ ಓ ಮಲ್ಲಿಕಾರ್ಜುನ್,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ ನಾಗೇಂದ್ರ ಕುಮಾರ್ ಸಂತಾಪ ಸೂಚಿಸಿದ್ದಾರೆ.