ಮಂಡ್ಯ ತಾಲೂಕಿನ ಬಸರಾಳು ಹೋಬಳಿಯ ಹಲ್ಲೇಗೆರೆ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಬಿ.ಎಸ್ ಶೃತಿ, ಉಪಾಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಭಾಗ್ಯಮ್ಮ ಪಾಪಯ್ಯ ಆಯ್ಕೆಯಾಗಿದ್ದಾರೆ.
ಒಟ್ಟು 19 ಸದಸ್ಯ ಬಲದ ಗ್ರಾಮ ಪಂಚಾಯಿತಿಗೆ ಸೋಮವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಬಿ.ಎಸ್ ಶೃತಿ ಮಹೇಶ್ ಹಾಗೂ ಮಾಲಾಶ್ರೀ ಮುರುಳಿ ಸ್ಪರ್ಧೆ ಮಾಡಿದ್ದರು. ಗೌಪ್ಯ ಮತದಾನ ನಡೆದಾಗ ಬಿ.ಎಸ್.ಶೃತಿ 12 ಮತಗಳನ್ನು ಪಡೆದು ಅಧ್ಯಕ್ಷರಾಗಿ ಆಯ್ಕೆಯಾದರು. ಜೆಡಿಎಸ್ ಬೆಂಬಲಿತ ಮಾಲಾಶ್ರೀ 7 ಮತಗಳನ್ನು ಪಡೆಯುವ ಮೂಲಕ ಪರಾಭವಗೊಂಡರು.
ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಭಾಗ್ಯಮ್ಮ ಪಾಪಯ್ಯ 10 ಮತಗಳನ್ನು ಪಡೆದು ವಿಜಯಿಯಾದರೆ, ಕಾಂಗ್ರೆಸ್ ಬೆಂಬಲಿತ ಪ್ರತಿಸ್ಪರ್ಧಿ ಲೋಕೇಶ್ 9 ಮತಗಳನ್ನು ಪಡೆದು ಪರಾಭವಗೊಂಡರು. ಚುನಾವಣಾಧಿಕಾರಿಯಾಗಿ ಮಂಡ್ಯ ತಾ.ಪಂ ಇಓ ಕಾರ್ಯನಿರ್ವಹಿಸಿದರು.
ನೂತನ ಅಧ್ಯಕ್ಷರನ್ನು ಹಲ್ಲೇಗೆರೆ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ರವೀಂದ್ರ ಹೆಚ್.ಎಚ್. ಸುರೇಶ್ ಎಸ್.ಡಿ ತಾ.ಪಂ. ಮಾಜಿ ಸದಸ್ಯ ಕೃಷ್ಣ ಎಂ, ಮುಖಂಡರಾದ ಹೆಚ್.ಎಸ್. ಪುಟ್ಟಸ್ವಾಮಿ ಅಭಿನಂದಿಸಿದರು.