Friday, September 20, 2024

ಪ್ರಾಯೋಗಿಕ ಆವೃತ್ತಿ

ಕೆ.ಆರ್.ಪೇಟೆ| ಕರುವನ್ನು ತಿನ್ನಲು ಕೊಟ್ಟಿಗೆಗೆ ಚಿರತೆ ದಾಳಿ ಇಟ್ಟ ಚಿರತೆ

ಚಿರತೆಯೊಂದು ಕೊಟ್ಟಿಗೆಗೆ ನುಗ್ಗಿ ಕರುವಿನ ಮೇಲೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆಯು ಕೆ.ಆರ್.ಪೇಟೆ ತಾಲ್ಲೂಕಿನ ಬೊಮ್ಮೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಕೃಷ್ಣರಾಜಪೇಟೆ ತಾಲ್ಲೂಕಿನ ಬೊಮ್ಮೇನಹಳ್ಳಿ ಗ್ರಾಮದಲ್ಲಿ ರೈತ ಪುಟ್ಟರಾಜು ಅವರಿಗೆ ಸೇರಿದ ಹಸುವಿನ ಕರುವನ್ನು ಚಿರತೆಯು ದಾಳಿ ಮಾಡಿ ತಿಂದು ಹಾಕಿದೆ.

ಇಂದು ಬೆಳಗಿನ ಜಾವ ಸುಮಾರು 3 ರಿಂದ 4 ಗಂಟೆಯ ಸಮಯದಲ್ಲಿ ಚಿರತೆ ಆಗಮಿಸಿ ಕೊಟ್ಟಿಗೆಯಲ್ಲಿದ್ದ ಹಸುವಿನ ಕರುವಿನ ಕುತ್ತಿಗೆಯ ಭಾಗವನ್ನು ಸಂಪೂರ್ಣವಾಗಿ ತಿಂದುಹಾಕಿದೆ.

ಗ್ರಾಮದಲ್ಲಿ ಮಹಿಳೆಯರು, ಮಕ್ಕಳು ಭಯಭೀತರಾಗಿ ತಿರುಗಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಬೋನನ್ನು ಇಟ್ಟು ಚಿರತೆ ಹಿಡಿಯುವಂತೆ ಹರಿಹರಪುರ ಗ್ರಾಮ ಪಂಚಾಯತಿ ಸದಸ್ಯ ಹಾಗೂ ವಕೀಲರಾದ ಹರ್ಷ ಅವರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!