ರಾಜ್ಯ ಬಿಜೆಪಿ ನಾಯಕರದ್ದು ಎಂತಹಾ ದುಸ್ಥಿತಿ.. ರಾಜ್ಯ ಬಿಜೆಪಿಯ ‘ದಂಡ’ ನಾಯಕರು, ಚಕ್ರವರ್ತಿಗಳು, ಸಾಮ್ರಾಟರೆಲ್ಲಾ ಬೀದಿ ಪಾಲಾಗಿದ್ದಾರೆ! ಬಿಜೆಪಿಯ ಹೈಕಮಾಂಡ್ ಹಾಗೂ ಮೋದಿ ಹೀನಾಯ ಸೋಲಿನ ಬಳಿಕ ರಾಜ್ಯದ ನಾಯಕರನ್ನು ಹತ್ತಿರಕ್ಕೂ ಸೇರಿಸದೇ ಬೀದಿ ಪಾಲು ಮಾಡಿದ್ದಾರೆ ಎಂಬುದಕ್ಕೆ ಈ ಚಿತ್ರಗಳೇ ಸಾಕ್ಷಿ! ಛೇ, ಮಿನಿಮಮ್ ಮರ್ಯಾದೆಯೂ ಇಲ್ಲದಾಯಿತೇ? ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನ ಆಗಮಿಸಿದ ಸಂದರ್ಭದಲ್ಲಿ ಅವರನ್ನು ಸ್ವಾಗತಿಸಲು ರಸ್ತೆಬದಿಯಲ್ಲಿ ನಿಂತು ಜನ ಸಾಮಾನ್ಯರಂತೆ ನಿಂತಿರುವ ಪೋಟೋವನ್ನು X ನಲ್ಲಿ ಪೋಸ್ಟ್ ಮಾಡಿ ರಾಜ್ಯ ಬಿಜೆಪಿ ನಾಯಕರಿಗೆ ಇಂತಹ ಸ್ಥಿತಿ ಬರಬಾರದಿತ್ತು ಎಂದು ವ್ಯಂಗ್ಯವಾಡಿದೆ.
ಬಿಜೆಪಿಯ
ರಾಜ್ಯಾಧ್ಯಕ್ಷ,
ಮಾಜಿ ಸಚಿವರುಗಳು,
ಹಾಲಿ ಶಾಸಕರುಗಳು,
ಹೀಗೆ ಬೀದಿಪಾಲಾಗಿದ್ದಾರೆ ಎಂದರೆ “ಸರ್ವಾಧಿಕಾರಿ”ಯ ಮೊದಲ ಬಲಿಪಶುಗಳು ಬಿಜೆಪಿಗರಿಗೇ ಅಲ್ಲವೇ?ಆತ್ಮ ಗೌರವ, ಸ್ವಾಭಿಮಾನವಿಲ್ಲದೆ ಕೈಬೀಸುತ್ತಿದ್ದಾರೆ ಎಂದರೆ ಗುಲಾಮಗಿರಿಯ ಪರಮಾವಧಿಗೆ ತಲುಪಿದ್ದಾರೆ ಎಂದರ್ಥವಲ್ಲವೇ @BJP4Karnataka ? pic.twitter.com/xYcUcxBhJK
— Karnataka Congress (@INCKarnataka) August 26, 2023
“>
ಬಿಜೆಪಿಯ ರಾಜ್ಯಾಧ್ಯಕ್ಷ, ಮಾಜಿ ಸಚಿವರುಗಳು, ಹಾಲಿ ಶಾಸಕರುಗಳು, ಹೀಗೆ ಬೀದಿಪಾಲಾಗಿದ್ದಾರೆ ಎಂದರೆ “ಸರ್ವಾಧಿಕಾರಿ”ಯ ಮೊದಲ ಬಲಿಪಶುಗಳು ಬಿಜೆಪಿಗರಿಗೇ ಅಲ್ಲವೇ? ಆತ್ಮ ಗೌರವ, ಸ್ವಾಭಿಮಾನವಿಲ್ಲದೆ ಕೈಬೀಸುತ್ತಿದ್ದಾರೆ ಎಂದರೆ ಗುಲಾಮಗಿರಿಯ ಪರಮಾವಧಿಗೆ ತಲುಪಿದ್ದಾರೆ ಎಂದರ್ಥವಲ್ಲವೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಮೋದಿ ಸ್ವಾಗತಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮಾಜಿ ಸಚಿವರಾದ ಗೋಪಾಲಯ್ಯ, ಮುನಿರತ್ನ ಮತ್ತಿತರರು ರಸ್ತೆ ಬದಿಯಲ್ಲಿ ನಿಂತಿರುವುದನ್ನು ಚಿತ್ರದಲ್ಲಿ ಕಾಣಬಹುದು.