ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ಮತ್ತೆ ನೀರು ಬಿಡುಗಡೆ ಮಾಡಿರುವುದರಿಂದ ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯು ಕಾವೇರಿ ಹೋರಾಟಕ್ಕೆ ಕರೆ ನೀಡಿದೆ.
ತಮಿಳುನಾಡಿಗೆ ನೀರು ಬಿಟ್ಟಿರುವುದಕ್ಕೆ ವಿರೋಧ ವ್ಯಕ್ತಪಡಿಸಿರುವ ಸಮಿತಿ ನಾಳೆಯಿಂದ ( ಗುರುವಾರ ) ಪ್ರತಿಭಟನಾ ಧರಣಿ ನಡೆಸಲು ಮುಂದಾಗಿದೆ.
ಮಂಡ್ಯ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಆ. 31 ರಂದು ಬೆಳಗ್ಗೆ 10:30ಕ್ಕೆ ಧರಣಿ ಸತ್ಯಾಗ್ರಹ
ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ತಿಳಿಸಿದೆ.
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಪ್ರತಿನಿತ್ಯ 5 ಟಿಎಂಸಿ ನೀರು ಬಿಡಬೇಕು ಎಂದು ಆದೇಶ ಮಾಡಿರುವುದು ಅವಜ್ಞಾನಿಕ ರಾಜ್ಯ ಸರ್ಕಾರ ರೈತರ ಹಿತದೃಷ್ಟಿಯಿಂದ, ಅಣೆಕಟ್ಟುಗಳಲ್ಲಿ ನೀರು ಕಡಿಮೆ ಇರುವುದರಿಂದ ಯಾವುದೇ ಕಾರಣಕ್ಕೂ ನೀರು ಬಿಡುಗಡೆ ಮಾಡಬಾರದು ಒತ್ತಾಯ ಮಾಡಿದ್ದೆವು. ಆದರೂ ಸಹ ತಮಿಳುನಾಡಿಗೆ ನೀರು ಬಿಟ್ಟಿರುವುದು ಸರಿಯಲ್ಲ ಎಂದಿದ್ದಾರೆ.
ಧರಣಿ ಸತ್ಯಾಗ್ರಹಕ್ಕೆ ಮಂಡ್ಯ ಜಿಲ್ಲೆ ರೈತರು, ಕನ್ನಡ ಪರ ಸಂಘಟನೆಗಳು, ಪ್ರಗತಿಪರ ಸಂಘಟನೆಗಳು ದಲಿತ ಸಂಘರ್ಷ ಸಮಿತಿ, ಜನಪರ ಸಂಘಟನೆ ಸೇರಿದಂತೆ ಎಲ್ಲಾ ಸಂಘ ಸಂಸ್ಥೆಗಳು ಭಾಗವಹಿಸಬೇಕು ಎಂದು ಸಮಿತಿ ಮುಖಂಡರಾದ ಮಾಜಿ ಸಚಿವ ಎಂ ಎಸ್. ಆತ್ಮಾನಂದ, ಮಾಜಿ ಶಾಸಕ ಜಿ ಬಿ ಶಿವಕುಮಾರ್, ಮಲ್ಲನಾಯಕನ ಕಟ್ಟೆ ಬೋರೇಗೌಡ ಸುನಂದಾ ಜಯರಾಂ, ಬೇಕ್ರಿ ರಮೇಶ್, ಗುರುಪ್ರಸಾದ್ ಕೆರಗೋಡು, ಪ್ರಶಾಂತ ಬಾಬು ಮನವಿ ಮಾಡಿದ್ದಾರೆ.