ಮಂಡ್ಯ ಜಿಲ್ಲೆಯ ಬಿ.ಹೊಸೂರು ಕಾಲೋನಿಯಲ್ಲಿ ನಿರ್ಮಾಣವಾಗುತ್ತಿರುವ ಗಾಂಧಿ ಭವನ ಕಾಮಗಾರಿಯನ್ನು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಪರಿಶೀಲಿಸಿದರು.
ಒಂದು ತಿಂಗಳ ಒಳಗೆ ಕಟ್ಟಡದ ಕೆಲಸವೆಲ್ಲವು ಪೂರ್ಣಗೊಳಿಸಬೇಕು, ಜೊತೆಗೆ ಗಾಂಧೀಜಿಯವರ ಕಲಾಕೃತಿಗಳನ್ನೊಳಗೊಂಡ ಪ್ರತಿಮೆಗಳನ್ನು ನಿರ್ಮಾಣ ಮಾಡುವಂತೆ ನಿರ್ಮಿತಿ ಕೇಂದ್ರದ ಇಂಜಿನಿಯರ್ ಗಳಿಗೆ ಸಲಹೆ ಮತ್ತು ಸೂಚನೆಗಳನ್ನು ನೀಡಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕಿ ಎಸ್. ಎಚ್ ನಿರ್ಮಲ ಹಾಜರಿದ್ದರು.