ಪರಿಸರ ಮಾಲಿನ್ಯಕ್ಕೆ ಅವಕಾಶ ನೀಡದೆ ಶುಚಿತ್ವಕ್ಕೆ ಹೆಚ್ಚು ಒತ್ತು ನೀಡಿ ನಮ್ಮ ತಾಲೂಕಿನ ನಿರುದ್ಯೋಗಿ ಯುವಕರಿಗೆ ಮೊದಲ ಆದ್ಯತೆ ನೀಡಬೇಕು ಎಂದು ಶಾಸಕ ಹೆಚ್.ಟಿ ಮಂಜು ಸೂಚಿಸಿದರು.
ಕೆ.ಆರ್.ಪೇಟೆ ತಾಲೂಕಿನ ಬೂಕನಕೆರೆ ಹೋಬಳಿಯ ಬಣ್ಣೇನಹಳ್ಳಿ ಸಮೀಪವಿರುವ ಫೇವರಿಚ್ ಇನ್ಫ್ರಾ ಮೆಗಾ ಫುಡ್ ಪಾರ್ಕ್ ಲಿ. ಕಂಪನಿಗೆ ಧಿಡೀರ್ ಭೇಟಿ ನೀಡಿ ಸ್ಥಳ ಪರಿಸ್ಥಿತಿ ಅಧಿಕಾರಿಗಳೊಂದಿಗೆ ಮಾತನಾಡಿದ ಅವರು, ಕಂಪನಿಯ ವಿವಿಧ ರೈತರು ಬೆಳೆದಂತಹ ಹಣ್ಣು, ತರಕಾರಿಗಳು ಹಾಗೂ ಕೃಷಿ ಹುಟ್ಟುವಳಿಗಳನ್ನು ಸಂಸ್ಕರಣೆ ಮಾಡುವ ಸ್ಥಳಗಳಲ್ಲಿ ಶುಚಿತ್ವಕ್ಕೆ ಮೊದಲ ಆದ್ಯತೆ ನೀಡಿ, ಸುತ್ತಮುತ್ತಲಿನ ಗ್ರಾಮಗಳಿಗೆ ಪರಿಸರ ಮಾಲಿನ್ಯವಾಗದಂತೆ ಜಾಗೃತಿಯಿಂದ ಕಾರ್ಯನಿರ್ವಹಿಸಬೇಕೆಂದು ತಿಳಿಸಿದರು.
ಕಂಪನಿಗೆ ಹಗಲಿರುಳು ಶ್ರಮ ಪಡುವ ನೌಕರರಿಗೆ ಯಾವುದೇ ರೀತಿಯ ಕುಂದು ಕೊರತೆಯಾಗದಂತೆ ನೋಡಿಕೊಳ್ಳುತ್ತಾ ನಿರುದ್ಯೋಗಿಗಳ ನಿರ್ಮೂಲನೆಗಾಗಿ ಉದ್ಯೋಗ ಸೃಷ್ಟಿಸಬೇಕು, ಅದರಲ್ಲಿ ಹೆಚ್ಚು ಸ್ಥಳೀಯ ನಿರುದ್ಯೋಗ ಯುವಕ ಮಿತ್ರರಿಗೆ ಮೊದಲ ಆದ್ಯತೆ ಕಲ್ಪಿಸಬೇಕು,ರೈತರು ಬೆಳೆದ ಕೃಷಿ ಉತ್ಪನ್ನಗಳಿಗೆ ಒಳ್ಳೆಯ ಬೆಲೆಯನ್ನು ದೊರಕಿಸಿಕೊಡುವ ಮೂಲಕ ರೈತರ ಬದುಕನ್ನು ಹಸನು ಮಾಡುವುದಕ್ಕಾಗಿ ಶ್ರಮ ವಹಿಸಬೇಕು ಎಂದು ಸೂಚಿಸಿದರು.
ಈ ಸಂದರ್ಭದಲ್ಲಿ ಕಂಪನಿಯ ವ್ಯವಸ್ಥಾಪಕ ಜಯದೇವ ನಾಯ್ಡು,ವೇಲು ಮಣಿ,ವಿಕಾಸ್, ವಿವಿನ್ ನಾಯ್ಡು, ವಿಶಾಲ್,ತಾಲೂಕಿನ ಜೆಡಿಎಸ್ ಅಧ್ಯಕ್ಷ ಎ ಎನ್ ಜಾನಕೀರಾಮ್,ಯುವಜನತಾದಳ ರಾಜ್ಯ ಪ್ರಧಾನ ಕಾರ್ಯದರ್ಶಿ ಕುರುಬಹಳ್ಳಿ ನಾಗೇಶ್, ಪಿ ಎಲ್ ಡಿ ಬ್ಯಾಂಕ್ ಉಪಾಧ್ಯಕ್ಷ ಧನಂಜಯ್, ಟಿಎಪಿಸಿಎ ಎಸ್ ನಿರ್ದೇಶಕ ಬಲದೇವ್, ಶಾಸಕರ ಆಪ್ತ ಸಹಾಯಕ ಅರಳಕುಪ್ಪೆ ಪ್ರತಾಪ್,ಸೇರಿದಂತೆ ಉಪಸ್ಥಿತರಿದ್ದರು.