Thursday, September 19, 2024

ಪ್ರಾಯೋಗಿಕ ಆವೃತ್ತಿ

ಕಾವೇರಿ ಮಾತೆಗೆ ವಿಶೇಷ ಪೂಜೆ ಸಲ್ಲಿಸಿದ ಕಾಲೇಜು ವಿದ್ಯಾರ್ಥಿಗಳು !

ಮಂಡ್ಯನಗರದ ಕಾವೇರಿ ಭವನದ ಬಳಿ ಇರುವ ಕಾವೇರಿ ಮಾತೆಗೆ ಕಾಲೇಜು ವಿದ್ಯಾರ್ಥಿಗಳು ಬುಧವಾರ ವಿಶೇಷ ಪೂಜೆ ಸಲ್ಲಿಸಿದರು.

ರೈತರಿಗೆ ದ್ರೋಹ ಮಾಡಿ, ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಬಿಟ್ಟರೂ ದೇವರ ಕೃಪೆ ಎಂದೆಂದಿಗೂ ನಮ್ಮೊಂದಿಗೆ ಇರುತ್ತದೆ. ಇಂದು ವರುಣನ ಕೃಪೆ ಹಾಗೂ ಕಾವೇರಿ ಮಾತೆಯ ಆಶೀರ್ವಾದದಿಂದ ಕೆ.ಆರ್.ಎಸ್ ಜಲಾಶಯಕ್ಕೆ 11,000 ಕ್ಯೂಸೆಕ್ ನೀರು ಹರಿದು ಬರುತ್ತಿದೆ ಎಂದು ವಿದ್ಯಾರ್ಥಿಗಳು ಸಂತಸ ವ್ಯಕ್ತಪಡಿಸಿದರು.

ಕಾವೇರಿ ಮಾತೆಯು ಎಂದಿಗೂ ಮೈದುಂಬಿ ಹರಿಯುತ್ತಿರಲ್ಲಿ, ರೈತರ ಸಂಕಷ್ಟಗಳು ದೂರವಾಗಲಿ ಎಂದು ಪ್ರಾರ್ಥಿಸಿ ವಿಶೇಷ ಪೂಜೆ ಸಲ್ಲಿಸಿದರು.

ಈ ಸಮಯದಲ್ಲಿ ವಿದ್ಯಾರ್ಥಿಗಳಾದ ಪ್ರೀತಮ್ ಗೌಡ, ಶ್ರೇಯಸ್, ಪವನ್ ಕುಮಾರ್, ಸುದರ್ಶನ್ ಇನ್ನು ಹಲವರು ಭಾಗಿಯಾಗಿದ್ದರು

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!