Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ| ಸರ್ಕಾರದ ನೀತಿ ವಿರೋಧಿಸಿ ಬಿಜೆಪಿ ಪ್ರತಿಭಟನೆ

ಸುಳ್ಳು ಭರವಸೆಗಳನ್ನು ಕೊಟ್ಟ ಕಾಂಗ್ರೆಸ್ ಸರ್ಕಾರ ಜನ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯರ್ತರು ಮಳವಳ್ಳಿ ಪಟ್ಟಣದ ಅನಂತ್‌ರಾಂ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಸಾರಿಗೆ ಬಸ್ ನಿಲ್ದಾಣದಿಂದ ಮಳವಳ್ಳಿ ಪಟ್ಟಣದ ಅನಂತ್‌ರಾಂ ವೃತ್ತಕ್ಕೆ ಆಗಮಿಸಿದ ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿ ಕಾಂಗ್ರೆಸ್ ಸರ್ಕಾರದ ವಿರುದ್ದ ಕಿಡಿಕಾರಿದರು.

ಬಿಜೆಪಿ ಮುಖಂಡ ಮುನಿರಾಜು ಮಾತನಾಡಿ, ಚುನಾವಣೆ ಸಂದರ್ಭದಲ್ಲಿ ಘೋಷಣೆ ಮಾಡಿದ ಭರವಸೆಗಳನ್ನು ಈಡೇರಿಸಿದ್ದೇವೆ ಎನ್ನುವುದರ ಮೂಲಕ ರಾಜ್ಯದ ಜನರನ್ನು ಕಾಂಗ್ರೆಸ್ ಸರ್ಕಾರ ದಿಕ್ಕು ತಪ್ಪಿಸುತ್ತಿದೆ, ರಾಜ್ಯದ ಜನರು ಸಂಕಷ್ಟದಲ್ಲಿದ್ದರೂ ಕೂಡ ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸುತ್ತಿದ್ದಾರೆಂದು ಹೇಳಿದರು.
.
ಬಿಜೆಪಿ ಹಿರಿಯ ಮುಖಂಡ ಯಮದೂರು ಸಿದ್ದರಾಜು ಮಾತನಾಡಿ, ಪಂಚರಾಜ್ಯ ಚುನಾವಣೆಗೆ ಸುಮಾರು ಸಾವಿರ ಕೋಟಿ ಹಣ ಸಂಗ್ರಹಿಸಲಾಗಿದ್ದು, ಹಣ ತೆಗೆದುಕೊಂಡು ಹೋಗಲು ಕೇಂದ್ರ ನಾಯಕರು ಬೆಂಗಳೂರಿಗೆ ಆಗಮಿಸಿದ್ದಾರೆ, ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಯನ್ನು ಖಂಡಿಸಿ ಬಿಜೆಪಿ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ ಎಂದರು.

ಪ್ರತಿಭಟನೆಯಲ್ಲಿ ಮಂಡಲ ಅಧ್ಯಕ್ಷ ಕೃಷ್ಣ, ಮುಖಂಡರಾದ ಅಶೋಕ್‌ಕುಮಾರ್, ಬಸವರಾಜು, ಮೋಹನ್,ರವಿ.ರಮೇಶ್, ರಾಜೀವ್,ಚಿಕ್ಕಣ್ಣ,ಅಶೋಕ್,ವೇಣು, ಅಪ್ಪಾಜಿಗೌಡ ಸೇರಿದಂತೆ ಇತರರು ಇದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!