ಮಂಡ್ಯ ಜಿಲ್ಲಾಡಳಿತದ ವತಿಯಿಂದ ೬೮ನೇ ಕರ್ನಾಟಕ ರಾಜ್ಯೋತ್ಸವವನ್ನು ನವೆಂಬರ್ ೧ ರಂದು ಬೆಳಿಗ್ಗೆ ೯ ಗಂಟೆಗೆ ಮಂಡ್ಯ ಜಿಲ್ಲಾ ಸಶಸ್ತ್ರ ಮೀಸಲು ಕವಾಯತು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ ೭.೩೦ ಕ್ಕೆ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಜೈ ಭುವನೇಶ್ವರಿ ರಥ ಹಾಗೂ ಕಲಾ ತಂಡಗಳ ಮೆರವಣಿಗೆ ಹೊರಟು ೮.೩೦ ಕ್ಕೆ ಜಿಲ್ಲಾ ಸಶಸ್ತ್ರ ಮೀಸಲು ಕವಾಯತು ಮೈದಾನದಲ್ಲಿ ಸಮಾವೇಶಗೊಳ್ಳುವುದು. ನಂತರ ೯ ಗಂಟೆಗರ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ರಾಜ್ಯೋತ್ಸವದ ಸಂದೇಶ ನೀಡುವರು.
ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಶಾಸಕರಾದ ಪಿ.ರವಿಕುಮಾರ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸಂಸದೆ ಸುಮಲತಾ ಅಂಬರೀಶ್, ವಿಧಾನ ಪರಿಷತ್ ಶಾಸಕರಾದ ಮರಿತಿಬ್ಬೇಗೌಡ, ಮಧು ಜಿ ಮಾದೇಗೌಡ, ದಿನೇಶ್ ಗೂಳಿಗೌಡ ಹಾಗೂ ವಿಧಾನಸಭೆ ಶಾಸಕರಾದ ಎ.ಬಿ ರಮೇಶ್ ಬಂಡಿಸಿದ್ದೇಗೌಡ, ಪಿ.ಎಂ ನರೇಂದ್ರಸ್ವಾಮಿ, ದರ್ಶನ್ ಪುಟ್ಟಣ್ಣಯ್ಯ, ಹೆಚ್.ಟಿ ಮಂಜು, ಕೆ.ಎಂ ಉದಯ್ ಭಾಗವಹಿಸಲಿದ್ದಾರೆ.