Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಬಿ.ಬಸವರಾಜು ಅಭಿನಂದನೆ- ಕೃತಿ ಲೋಕಾರ್ಪಣೆ

ಮಂಡ್ಯದ ಬಿ.ಬಸವರಾಜು ಅಭಿಮಾನಿಗಳ ಬಳಗದ ವತಿಯಿಂದ ಬಿ ಬಸವರಾಜ್ ಅವರಿಗೆ ಅಭಿನಂದನೆ ಹಾಗೂ ಮೌನ ಚಿಂತಕ ಕೃತಿ ಲೋಕಾರ್ಪಣೆ ಸಮಾರಂಭವನ್ನು ಅ. 29ರಂದು ಮಂಡ್ಯದ ರೈತ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಎಂ ಎಸ್ ಆತ್ಮಾನಂದ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿ.ಬಸವರಾಜು ಅವರು ಮಾಡಿರುವ ಸಾಮಾಜಿಕ ಸೇವೆಯ ಹಿನ್ನೆಲೆಯಲ್ಲಿ ಅವರಿಗೆ ಅಭಿನಂದನೆ ಮತ್ತು ನುಡಿ ನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಬಿ ಬಸವರಾಜು ಜಿಲ್ಲಾ ಪಂಚಾಯತಿ ಅಧ್ಯಕ್ಷರಾಗಿ ಸರ್ವ ಪಕ್ಷದ ನಾಯಕರಾಗಿ ತಾಲೂಕು ಬೋರ್ಡ್ ಸದಸ್ಯರಾಗಿ ಹಾಗೂ ಚಾಮುಂಡೇಶ್ವರಿ ಸಕ್ಕರೆ ಕಾರ್ಖಾನೆಯ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ಜಿ ಮಾದೇಗೌಡರ ಬೆಂಬಲಿಗರಾಗಿ ಹಿಂಬಾಲಕರಾಗಿ ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲದಂತೆ

ಹಳ್ಳಿಗಾಡಿನ ಜನರ ಶಿಕ್ಷಣ, ಕುಡಿಯುವ ನೀರು, ಸಾರಿಗೆ ವ್ಯವಸ್ಥೆ ಕೆರೆ ಕೆಟ್ಟೆಗಳ ನಿರ್ಮಾಣ ದೇವಸ್ಥಾನಗಳ ಜೀವನೋದ್ಧಾರ ಸೇರಿದಂತೆ ಹಲವಾರು ಜನೋಪಯೋಗಿ ಕೆಲಸಗಳನ್ನು ಮಾಡಿದ್ದಾರೆ, ಹಾಗಾಗಿ ಇವರ ಸೇವೆಯನ್ನು ಗುರುತಿಸಿ ಅಭಿನಂದನೆ ಸಲ್ಲಿಸಲಾಗುತ್ತಿದೆ ಎಂದು ನುಡಿದರು.

ಗೋಷ್ಠಿಯಲ್ಲಿ ಪ್ರೊ.ಬೋರೇಗೌಡ, ಶಂಕರಲಿಂಗೇಗೌಡ, ಶಿವಣ್ಣಗೌಡ ಸೇರಿದಂತೆ ಇತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!