ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯನ್ನು ನೂತನವಾಗಿ ಸಿದ್ಧಪಡಿಸುವ ಕಾರ್ಯವು ಈಗಾಗಲೇ ಪ್ರಾರಂಭವಾಗಿದ್ದು, ಅರ್ಹ ಮತದಾರರು ನೋಂದಣಿ ಮಾಡಿಸುವಂತೆ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಮನವಿ ಮಾಡಿದರು.
ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ನೋಂದಣಿ ಸಂಬಂಧ ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.
ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರ ಪಟ್ಟಿ ಸಂಬಂಧಪಟ್ಟಂತೆ ಈಗಾಗಲೇ ಮಾರ್ಗಸೂಚಿ ಹೊರಡಿಸಿದ್ದೇವೆ. ಅರ್ಹ ಮತದಾರರ ನೋಂದಣಿ ಕಾರ್ಯ ಮಾಡುವ ಕೆಲಸವಾಗುತ್ತಿದೆ. ಇದುವರೆಗೂ 1,675 ಶಿಕ್ಷಕರು ಮಾತ್ರ ನೋಂದಣಿಯನ್ನು ಮಾಡಿದ್ದಾರೆ ಎಂದರು.
ಅರ್ಜಿ ನಮೂನೆ 19ರಲ್ಲಿ ಅರ್ಜಿಯನ್ನು ಸಲ್ಲಿಸಲು ನವೆಂಬರ್ 6 ಕೊನೆ ದಿನಾಂಕವಾಗಿರುತ್ತದೆ. ಶಾಲೆಯ ಶಿಕ್ಷಕರು, ಉಪನ್ಯಾಸಕರು, ಅರ್ಹರಿರುವ ಎಲ್ಲಾ ಮತದಾರರು ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳಿ ಎಂದು ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಹೆಚ್.ಎಲ್ ನಾಗರಾಜು, ತಹಶಿಲ್ದಾರ್ ಶಿವಕುಮಾರ್ ಬಿರಾದಾರ ,ಡಿಡಿಪಿಯು ಚಲುವಯ್ಯ, ಬಿಇಒ ಮಹದೇವ, ಸೌಭಾಗ್ಯ ಸೇರಿದಂತೆ ಇನ್ನಿತರರು ಹಾಜರಿದ್ದರು.